Sunday, March 15, 2026
Google search engine
Homeಮುಖಪುಟತಿಪಟೂರಿನಲ್ಲಿ ಅಪಘಾತ : ಸ್ಥಳದಲ್ಲೇ ಮೂವರು ಸಾವು

ತಿಪಟೂರಿನಲ್ಲಿ ಅಪಘಾತ : ಸ್ಥಳದಲ್ಲೇ ಮೂವರು ಸಾವು

ಕೆಎಸ್.ಆರ್.ಟಿ.ಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಮೂರವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಬಿದರಗುಡಿ ತಿಮ್ಮಲಾಪುರ ಸಮೀಪ ಇಂದು ಮುಂಜಾನೆ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಇಬ್ಬರು ತೀವ್ರ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಚಿಂತಾಜನಕವಾಗಿದೆ.

ಮೃತರನ್ನು ತುಮಕೂರು ತಾಲ್ಲೂಕು ಬೆಳ್ಳಾವಿಯ 35 ವರ್ಷದ ಮೋಹನ್, 38 ವರ್ಷದ ಸಿದ್ದರಾಜು ಮತ್ತು 28 ವರ್ಷದ ರಾಜಣ್ಣ ಎಂದು ಗುರುತಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಶಿವಮೊಗ್ಗದಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಕಾರು ತುಮಕೂರಿನಿಂದ ಅರಸಿಕೆರೆ ಕಡೆ ಹೋಗುತ್ತಿತ್ತು ಎಂದು ತಿಳಿದುಬಂದಿದ್ದು, ಮತ್ತಿಹಳ್ಳಿ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ತಿಪಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular