ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಯಾತ್ರಾಸ್ಥಳ ಅಮರನಾಥ್ ಗುಹೆಯ ವ್ಯಾಪ್ತಿಯಲ್ಲಿ ಮೇಘಸ್ಪೋಟ ಸಂಭವಿಸಿ ಎಂಟು ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಶುಕ್ರವಾರ ಸಂಜೆ 5.30ರಲ್ಲಿ ಮೇಘಸ್ಪೋಟ ಸಂಭವಿಸಿದ್ದು ಬಾರೀ ಮಳೆಯ ಹಿನ್ನೆಲೆಯಲ್ಲಿ ಗಾಯಗೊಂಡವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಮೇಘಸ್ಪೋಟ ಹಿನ್ನೆಲೆಯಲ್ಲಿ ಮಳೆಯಲ್ಲಿ ಸಿಲುಕಿದವರನ್ನು ರಕ್ಷಿಸುವ ಕಾರ್ಯ ಮುಂದುವರೆದಿದೆ. ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ.
ಅಮರನಾಥ ಗುಹೆಯಲ್ಲಿ ಕೆಲವು ಲಂಗರ್ ಗಳು ಮತ್ತು ಟೆಂಟ್ ಗಳು ಮೇಘಸ್ಪೋಟ ಪ್ರವಾಹಕ್ಕೆ ಸಿಲುಕಿವೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಏರ್ಲಿಫ್ಟ್ ಮಾಡಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.


