ಜಮ್ಮು ಮತ್ತು ಕಾಶ್ಮೀರದ ಗಂದರ್ ಬಾಲ್ ಜಿಲ್ಲೆಯ ಅಮರನಾಥ ಗುಹೆ ದೇಗುಲದ ಬಳಿ ಮೇಘಸ್ಫೋಟ ಸಂಭವಿಸಿ ಉಂಟಾದ ಹಠಾತ್ ಪ್ರವಾಹದಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಯಾಂಪ್ ನಲ್ಲಿ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 25 ಮಂದಿ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ವಿಭಾಗೀಯ ಆಯುಕ್ತ ಕೆ.ಪಾಂಡುರಂಗ್ ಪೋಲ್ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಶಿಬಿರವು ಸುಮಾರು 3 ಸಾವಿರ ಜನರಿಗೆ ಅವಕಾಶ ಕಲ್ಪಿಸುತ್ತದೆ. ಬಹುಪಾಲು ಯಾತ್ರಾರ್ಥಿಗಳು ಚಾರಣದಲ್ಲಿದ್ದಾಗ ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೋಲ್ ಹೇಳಿದ್ದಾರೆ.
ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮೃತ ದೇಹಗಳ ಗುರುತುಗಳು ಇನ್ನಷ್ಟೇ ಪತ್ತೆಯಾಗಬೇಕಾಗಿದೆ ಎಂದು ಹೇಳಿದ್ದಾರೆ.


