Friday, October 18, 2024
Google search engine
Homeಮುಖಪುಟಬಿಜೆಪಿ ಕಾರ್ಯಕರ್ತ ಹತ್ಯೆ ಪ್ರಕರಣ - ಇಬ್ಬರು ಆರೋಪಿಗಳ ಬಂಧನ

ಬಿಜೆಪಿ ಕಾರ್ಯಕರ್ತ ಹತ್ಯೆ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸವಣೂರಿನ ನಿವಾಸಿ ಜಾಕೀರ್ ಮತ್ತು ಬೆಳ್ಳಾರೆ ಮೊಹಮ್ಮದ್ ಶಫೀಕ್ ಅವರನ್ನು ಬಂಧಿಸಿದ್ದೇವೆ. ತನಿಖೆ ನಡೆಯುತ್ತಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

2020ರಲ್ಲಿ ಬೆಳ್ಳಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಹಲ್ಲೆ ಪ್ರಕರಣದಲ್ಲಿ ಜಾಕೀರ್ ಹೆಸರು ಇದೆ ಎಂದು ಹೇಳಲಾಗುತ್ತಿದೆ. ಝಾಕಿರ್ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾದೊಂದಿಗೆ ಸಂಪರ್ಕ ಹೊಂದಿದ್ದಾನೆಂದು ಪೊಲೀಸರು ಹೇಳಿದ್ದಾರೆ.

ಯಾವುದೇ ನೋಂದಾವಣೆ ಅಥವಾ ಸದಸ್ಯತ್ವ ಯಾವುದೂ ಇಲ್ಲ. ಆದರೆ ನಮಗೆ ಸಿಕ್ಕಿರುವ ಮಾಹಿತಿಯೆಂದರೆ ಝಾಕಿರ್ ಪಿಎಫ್ಐ ಚಟುವಟಿಕೆಗಳೊಂದಿಗೆ ಸಂಬಂಧ ಹೊಂದಿದ್ದರು. ಅದನ್ನು ಸ್ಥಾಪಿಸಲು ನಾವು ಈಗ ಪುರಾವೆಗಳನ್ನು ಸಂಗ್ರಹಿಸಬೇಕಾಗಿದೆ ಎಂದು ಎಸ್.ಪಿ. ರಿಷಿಕೇಶ್ ಭಗವಾನ್ ಸೋನಾವಾನೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular