ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಯನ್ನು ಜನ ಇಂದಿಗೂ ನೆನಪಿಸಿಕೊಳ್ಳುತ್ತಿದ್ದಾರೆ ಎಂದು ವಿಧಾಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಯೋಜನೆ ಜಾರಿಗೊಳಿಸಿದ್ದ ನನಗೆ ಇದಕ್ಕಿಂತ ಖುಷಿಯ ವಿಚಾರ ಬೇರಿಲ್ಲ ಎಂದು ತಿಳಿಸಿದ್ದಾರೆ.
ನಾಡಿನ ಬಡವರು, ರೈತರು ನೆಮ್ಮದಿಯಿಂದ ಬದುಕುವಂತಾಗಬೇಕು ಎಂದರೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ಸಾಮಾನ್ಯ ಜನರ ಮನದ ಮಾತಾಗಿದೆ ಎಂದಿದ್ದಾರೆ.