Friday, January 30, 2026
Google search engine
Homeಜಿಲ್ಲೆತುಮಕೂರು - ಜೆಡಿಎಸ್ ತೆಕ್ಕೆಗೆ ಬೆಳಗುಂಪ ಪಂಚಾಯ್ತಿ - ಮಾಜಿ ಶಾಸಕ ಸುರೇಶ್ ಗೌಡಗೆ ಮುಖಭಂಗ

ತುಮಕೂರು – ಜೆಡಿಎಸ್ ತೆಕ್ಕೆಗೆ ಬೆಳಗುಂಪ ಪಂಚಾಯ್ತಿ – ಮಾಜಿ ಶಾಸಕ ಸುರೇಶ್ ಗೌಡಗೆ ಮುಖಭಂಗ

ತುಮಕೂರು ಗ್ರಾಮಾಂತರ ಕ್ಷೇತ್ರದ ಬೆಳಗುಂಬ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನ ಜೆಡಿಎಸ್ ಪಾಲಾಗಿದ್ದು ಮಂಜುನಾಥ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿಗೆ ಸೋಲಾಗಿದ್ದು, ಮಾಜಿ ಶಾಸಕ ಸುರೇಶ್ ಗೌಡ ಅವರಿಗೆ ತೀವ್ರ ಮುಖಭಂಗವಾಗಿದೆ.

18 ಸದಸ್ಯ ಬಲದ ಬೆಳಗುಂಬ ಪಂಚಾಯ್ತಿಯಲ್ಲಿ 12 ಮಂದಿ ಬಿಜೆಪಿ ಸದಸ್ಯರು, 6 ಮಂದಿ ಜೆಡಿಎಸ್ ಸದಸ್ಯರಿದ್ದರು. ಶಾಸಕ ಗೌರಿಶಂಕರ್ ಕಾರ್ಯವೈಖರಿ ಮೆಚ್ಚಿ ಬಿಜೆಪಿಯ 4 ಸದಸ್ಯರು ಜೆಡಿಎಸ್ ಪರವಾಗಿ ಮತ ಚಲಾಯಿಸಿದರು. ಹೀಗಾಗಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಲು ಕಾರಣವಾಯಿತು.

ಈ ಸಂದರ್ಭದಲ್ಲಿ ಹಾಜರಿದ್ದ ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿ, ನನ್ನ ಮೇಲೆ ವಿಶ್ವಾಸ ಇಟ್ಟಿರುವ ಬೆಳಗುಂಬ ಗ್ರಾ.ಪಂ ಸದಸ್ಯರಿಗೆ ಅಭಿನಂದನೆ ಸಲ್ಲಿಸುವೆ. ಈ ಗ್ರಾಮ ಪಂಚಾಯ್ತಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿ ಜನರನ್ನು ಪ್ರೀತಿಪೂರ್ವಕವಾಗಿ ಮಾತನಾಡಿಸಿ, ಸಮಸ್ಯೆ ನಿವಾರಿಸಿ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದರು.

ಅಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ್ ಮಾತನಾಡಿ, ಪಂಚಾಯ್ತಿಯಲ್ಲಿ ಉತ್ತಮ ಕೆಲಸ ಮಾಡುವ ಗುರಿ ಹೊಂದಿದ್ದೇನೆ. ಶಾಸಕ ಗೌರಿಶಂಕರ್ ನೇತೃತ್ವದಲ್ಲಿ ಅಭಿವೃದ್ಧಿ ಕೆಲಸ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular