Monday, March 16, 2026
Google search engine
Homeಮುಖಪುಟಮಾಗಡಿಯ ಕುಂಚಗಲ್ ಬಂಡೆ ಮಠದ ಶ್ರೀಗಳು ಆತ್ಮಹತ್ಯೆ

ಮಾಗಡಿಯ ಕುಂಚಗಲ್ ಬಂಡೆ ಮಠದ ಶ್ರೀಗಳು ಆತ್ಮಹತ್ಯೆ

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕು ಕುಂಚಗಲ್ ಬಂಡೆಮಠದ ಶ್ರೀಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ಮಠದಲ್ಲಿ ಒಂದೆರಡು ಪುಟಗಳ ಡೆತ್ ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಕೆಲವರು ತನಗೆ ಕಿರುಕುಳ ನೀಡುತ್ತಿದ್ದರು ಮತ್ತು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಬರೆಯಲಾಗಿದೆ ಎಂದು ಆರೋಪಿಸಲಾಗಿದೆ.

ನಾಲ್ಕು ನೂರು ವರ್ಷಗಳ ಇತಿಹಾಸವಿರುವ ಮಾಗಡಿ ತಾಲ್ಲೂಕಿನ ಕೆಂಪುಪರದ ಬಸಲಿಂಗೇಶ್ವರ ಸ್ವಾಮಿ ಮಠದ ಆವರಣದಲ್ಲಿ ಇರುವ ಪೂಜಾ ಕೊಠಡಿಯ ಕಿಟಕಿ ಗ್ರಿಲ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

1997ರಲ್ಲಿ ಮಠಾಧೀಶರಾಗಿ ಅಧಿಕಾರ ವಹಿಸಿಕೊಂಡಿದ್ದ ಶ್ರೀಗಳು ಕೆಲ ತಿಂಗಳ ಹಿಂದೆ ಪ್ರಧಾನ ಅರ್ಚಕರಾಗಿ ಬೆಳ್ಳಿಹಬ್ಬ ಆಚರಿಸಿಕೊಂಡಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಮೂಲಗಳ ಪ್ರಕಾರ ಬೆಳಗ್ಗೆ ಆರು ಗಂಟೆಯವರೆಗೆ ಪೂಜೆಯ ಕೊಠಡಿಯ ಬಾಗಿಲು ಮುಚ್ಚಿದ್ದರಿಂದ ಗಾಬರಿಗೊಂಡ ಭಕ್ತರು 4 ಗಂಟೆಗೆ ಎಚ್ಚರಗೊಂಡು ಬಾಗಿಲು ತೆರೆದಿದ್ದರು. ಶ್ರೀಗಳಿಗೆ ಪೋನ್ ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ. ಲೆಕ್ಕಾಧಿಕಾರಿಗಳು ಕೊಠಡಿಯ ಹಿಂಬದಿಯಿಂದ ತೆರೆದು ಪರಿಶೀಲಿಸಿದಾಗ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.

ಬಳಿಕ ಭಕ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular