Saturday, October 19, 2024
Google search engine
Homeಮುಖಪುಟಸೇತುವೆ ಕುಸಿತ - ನ್ಯಾಯಾಂಗ ಆಯೋಗ ರಚನೆಗೆ ಪಿಐಎಲ್ ಅರ್ಜಿ - ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ

ಸೇತುವೆ ಕುಸಿತ – ನ್ಯಾಯಾಂಗ ಆಯೋಗ ರಚನೆಗೆ ಪಿಐಎಲ್ ಅರ್ಜಿ – ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ

ಗುಜರಾತ್ ನಲ್ಲಿ ಮೋರ್ಬಿ ಸೇತುವೆ ಕುಸಿತ ಘಟನೆಯ ತನಿಖೆಗೆ ನ್ಯಾಯಾಂಗ ಆಯೋಗ ರಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 14 ರಂದು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ಇತ್ತೀಚಿನ ವರದಿಗಳ ಪ್ರಕಾರ ಗುಜರಾತ್ ನ ಮೊರ್ಬಿಯಲ್ಲಿ ಮಚ್ಚು ನದಿಯಲ್ಲಿ ಭಾನುವಾರ ಬ್ರಿಟಿಷ್ ಕಾಲದ ಸೇತುವೆ ಕುಸಿದು ಸಾವನ್ನಪ್ಪಿದವರ ಸಂಖ್ಯೆ 134ಕ್ಕೆ ಏರಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ವಕೀಲ ವಿಶಾಲ್ ತಿವಾರಿ ಅವರು ತುರ್ತು ವಿಚಾರಣೆಗಾಗಿ ತಮ್ಮ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪ್ರಸ್ತಾಪಿಸಿದಾಗ ನೀವು ತುಂಬ ವೇಗವಾಗಿದ್ದೀರಿ. ನಿಮ್ಮ ಪ್ರಾರ್ಥನೆ ಏನು ಎಂದು ಮುಖ್ಯನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠ ಹೇಳಿದೆ.

ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ನ್ಯಾಯಾಂಗ ತನಿಖೆಗೆ ನಾನು ಕೋರುತ್ತಿದ್ದೇನೆ ಎಂದು ವಕೀಲರು ಹೇಳಿದರು. ಆಗ ಪೀಠವು ನವೆಂಬರ್ 14 ರಂದು ಐಪಿಎಲ್ ಅನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿತು.

ಕಳೆದ ಒಂದು ದಶಕದಿಂದ ನಮ್ಮ ದೇಶದಲ್ಲಿ ಹಲವಾರು ಘಟನೆಗಳು ನಡೆದಿವೆ. ಇದರಲ್ಲಿ ಕರ್ತವ್ಯಲೋಪ, ನಿರ್ಲಕ್ಷ್ಯ ನಿರ್ವಹಣೆ ಚಟುವಟಿಕೆಗಳಿಂದಾಗಿ ಅಪಾರ ಪ್ರಮಾಣದ ಸಾರ್ವಜನಿಕ ಸಾವು ನೋವುಗಳನ್ನು ತಪ್ಪಿಸಬಹುದಾಗಿತ್ತು ಎಂದು ಪಿಐಎಲ್ ನಲ್ಲಿ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular