Friday, October 18, 2024
Google search engine
Homeಮುಖಪುಟತಮ್ಮನ ಪುತ್ರ ನಾಪತ್ತೆ ನೆನಪಿಸಿಕೊಂಡು ಕಣ್ಣೀರು ಹಾಕಿದ ರೇಣುಕಾಚಾರ್ಯ

ತಮ್ಮನ ಪುತ್ರ ನಾಪತ್ತೆ ನೆನಪಿಸಿಕೊಂಡು ಕಣ್ಣೀರು ಹಾಕಿದ ರೇಣುಕಾಚಾರ್ಯ

ತನ್ನ ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿರುವುದನ್ನು ನೆನಪಿಸಿಕೊಂಡು ಶಾಸಕ ಎಂ.ಪಿ.ರೇಣುಕಾಚಾರ್ಯ ಕಣ್ಣೀರು ಹಾಕಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗಲೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿದ ವೇಳೆಯೂ ಭಾವುಕರಾಗಿ ಚಂದ್ರಶೇಖರ್ ನೆನೆದು ಕಣ್ಣೀರು ಸುರಿಸಿದರು.

ಕಪ್ಪು ಬಣ್ಣದ ಪ್ಯಾಂಟ್, ಶರ್ಟ್, ಕೇಸರಿ ಟವೆಲ್ ಧರಿಸಿದ್ದ ಚಂದ್ರಶೇಖರ್ ಕ್ರೇಟಾ ಕಾರಿನಲ್ಲಿ ಬಂದಿದ್ದಾರೆ. ಎಲ್ಲಾ ಕಡೆಗಳಲ್ಲಿಯೂ ಹುಡುಕಾಟ ಮುಂದುವರಿಸಿದ್ದಾರೆ. ರಾತ್ರಿಯಾಧರೂ ಮನೆಗೆ ಬಾದ ಕಾರಣ ಕುಟುಂಬದವರು ಮೊಬೈಲ್ ಗೆ ಕರೆ ಮಾಡಿದರೂ ಸ್ವೀಕರಿಸಿಲ್ಲ ಎಂದು ಹೇಳಿದರು.

ಬೆಳಗ್ಗೆ ಮತ್ತೆ ಕಾಲ್ ಮಾಡಿದರೂ ರಿಸೀವ್ ಆಗಿಲ್ಲ. ಆಮೇಲೆ ಸ್ವಿಚ್ ಆಫ್ ಆಗಿದೆ. ಸ್ನೇಹಿತರಿಗೂ ಕರೆ ಮಾಡಿ, ಬಂದಿದ್ದಾನೆಯೇ ಎಂಬ ಬಗ್ಗೆ ವಿಚಾರಿಸಲಾಗಿದೆ. ಬಳಿಕ ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಯಾವುದೇ ಮಾಹಿತಿಯೂ ಸಿಕ್ಕಿಲ್ಲ ಎಂದು ಕಣ್ಣೀರು ಕರೆದರು.

ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದೆ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ದುಃಖ ಇದ್ದರೂ ಪಾಲ್ಗೊಂಡಿದ್ದೆ. ಹೊನ್ನಾಳಿ ನ್ಯಾಮತಿ ಅವಳಿ ತಾಲ್ಲೂಕಿನ ಪ್ರತಿಯೊಬ್ಬರೂ ಧೈರ್ಯ ಹಾಗೂ ಆತ್ಮವಿಶ್ವಾಸ ತುಂಬುತ್ತಿದ್ದಾರೆ. ನಾನು ಚುನಾವಣೆಯಲ್ಲಿ ಸೋತಾಗಲೂ ಕಣ್ಣೀರು ಹಾಕಿರಲಿಲ್ಲ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular