Friday, October 18, 2024
Google search engine
Homeಮುಖಪುಟದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು - ತನಿಖೆಗೆ ಸಿಸೋಡಿಯಾ ಆಗ್ರಹ

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು – ತನಿಖೆಗೆ ಸಿಸೋಡಿಯಾ ಆಗ್ರಹ

ಗುಜರಾತ್ ಮತ್ತು ಎಂಸಿಡಿಯಲ್ಲಿ ಚುನಾವಣಾ ಸೋಲಿನ ಭೀತಿಯಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಆರೋಪಿಸಿ ಒಂದು ದಿನದ ಬಳಿಕ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಬಗ್ಗೆ ಚುನಾವಣಾ ಆಯೋಗಕ್ಕೆ ತನಿಖೆಗೆ ಒತ್ತಾಯಿಸಿ ದೂರು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ನಗರ ಪೊಲೀಸ್ ಕಮಿಷನರ್ ಅವರಿಗೆ ಆರೋಪಗಳನ್ನು ಪರಿಗಣಿಸುವಂತೆ ಸೂಚಿಸಿದ್ದಾರೆ. ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಆಪ್ ನಾಯಕರ ಟ್ವೀಟ್ ಗಳು ಮತ್ತು ಹೇಳಿಕೆಗಳನ್ನು ಲೆಫ್ಟಿನೆಂಟ್ ಗೌರ್ನರ್ ಗಮನಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಗುಜರಾತ್ ಮತ್ತು ಎಂಸಿಡಿ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಬಿಜೆಪಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ರೂಪಿಸುತ್ತಿದೆ ಎಂದು ಸಿಸೋಡಿಯ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸಂಸದ ಮನೋಜ್ ತಿವಾರಿ ಅವರು ಕೇಜ್ರಿವಾಲ್ ಮೇಲೆ ದಾಳಿ ಮಾಡಲು ತಮ್ಮ ಗೂಂಡಾಗಳಿಗೆ ಬಹಿರಂಗವಾಗಿ ಕೇಳುತ್ತಿದ್ದಾರೆ. ಇಂತಹ ಕ್ಷುಲ್ಲಕ ರಾಜಕೀಯಕ್ಕೆ ಎಎಪಿ ಹೆದರುವುದಿಲ್ಲ ಮತ್ತು ಅವರ ಗೂಂಡಾಗಿರಿಗೆ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಸಿಸೋಡಿಯಾ ಬರೆದಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಸಂಚು ರೂಪಿಸಿರುವುದನ್ನು ಅವರ ಭಾಷೆ ಸ್ಪಷ್ಟಪಡಿಸುತ್ತದೆ. ಈ ಬೆದರಿಕೆಗಾಗಿ ಮನೋಜ್ ತಿವಾರಿ ಅವರನ್ನು ಬಂಧಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸಿಸೋಡಿಯಾ ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular