Monday, March 16, 2026
Google search engine
Homeಮುಖಪುಟತುಮಕೂರು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜ್ - ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ತುಮಕೂರು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜ್ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಜಾತ್ಯತೀತ ಜನತಾ ದಳದಿಂದ ತುಮಕೂರು ನಗರ ವಿಧಾನಸಭಾ ಕ್ಷೇತ್ರ ಆಭ್ಯರ್ಥಿ ಯಾರೆಂಬುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡುವ ಮೂಲಕ ಇದುವರೆಗೂ ಇದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕೋಲಾರದಿಂದ ಆರಂಭವಾದ ಪಂಚರತ್ನ ಯಾತ್ರೆ ಗುರುವಾರ ತುಮಕೂರಿಗೆ ಆಗಮಿಸಿತು. ಸಿದ್ದಗಂಗಾ ಮಠಕ್ಕೆ ಬಂದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ತುಮಕೂರು ನಗರ ಕ್ಷೇತ್ರಕ್ಕೆ ಎನ್.ಗೋವಿಂದರಾಜು ಅಧಿಕೃತ ಅಭ್ಯರ್ಥಿಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

ಕಳೆದ ಕೆಲವು ದಿನಗಳ ಹಿಂದೆ ತುಮಕೂರಿಗೆ ಆಗಮಿಸಿದ್ದ ಅಟ್ಟಿಕಾ ಬಾಬು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದ ಅವರು ತುಮಕೂರು ನಗರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿದ್ದರು. ಇದು ಜಾತ್ಯತೀತ ಜನತಾ ದಳದ ಕಾರ್ಯಕರ್ತರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು.

ಆದರೆ ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತುಮಕೂರಿಗೆ ಎನ್.ಗೋವಿಂದರಾಜು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ಕಾರ್ಯಕರ್ತರಲ್ಲಿದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular