ಸೋಲಿನ ಭೀತಿಯಲ್ಲಿರುವ ರಾಜ್ಯ ಬಿಜೆಪಿ ಬೀದಿ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆ ಗೆಲ್ಲಲು ಹೊರಟಿರುವುದು ಧರ್ಮ, ಸಂಸ್ಕೃತಿ ಬಗ್ಗೆ ಬೊಗಳೆ ಬಿಡುವ ಸಂಘ ಪರಿವಾರದ ನೈತಿಕ ಅಧಃಪತನವಲ್ಲದೆ ಮತ್ತೇನು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಗಣಿ ಲೂಟಿಕೋರ ರೌಡಿಗಳನ್ನು ಕಟ್ಟಿಕೊಂಡು ಅಧಿಕಾರಕ್ಕೆ ಬಂದಿದ್ದ ಬಿಜೆಪಿಯ ಮುಖ್ಯಮಂತ್ರಿಗಳು ಕೊನೆಗೆ ಜೈಲು ಪಾಲಾಗಬೇಕಾಯಿತು ಎಂದು ಲೇವಡಿ ಮಾಡಿದ್ದಾರೆ.
ಈಗ ಹೊಸ ರೌಡಿ ಪಡೆ ಕಟ್ಟುತ್ತಿರುವುದು ಯಾರನ್ನು ಜೈಲಿಗೆ ಕಳಿಸಲು ಎಂದು ಬಿಜೆಪಿ ನಡವಳಿಕೆಯನ್ನು ಪ್ರಶ್ನಿಸಿದ್ದಾರೆ.
ಬಾಯಿ ಬಿಟ್ಟರೆ ಸಂಸ್ಕೃತಿ, ಆಚಾರ, ವಿಚಾರದ ಮಂತ್ರ ಉದುರಿಸುವ ಆರ್.ಎಸ್.ಎಸ್. ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕರೆಸಿಕೊಂಡಿದ್ದು ರೌಡಿ ಮೋರ್ಚಾ ಕಟ್ಟಲು ಸಲಹೆ ನೀಡಲಿಕ್ಕಾಗಿಯೇ? ಆರ್.ಎಸ್.ಎಸ್ ಮೌನ ಸಮ್ಮತಿ ಲಕ್ಷಣವೇ? ಎಂದು ಕೇಳಿದ್ದಾರೆ.


