Monday, March 16, 2026
Google search engine
Homeಮುಖಪುಟಒಳಮೀಸಲಾತಿ - ಹೋರಾಟಗಾರರ ಬಂಧನ - ಸಿದ್ದು ಖಂಡನೆ

ಒಳಮೀಸಲಾತಿ – ಹೋರಾಟಗಾರರ ಬಂಧನ – ಸಿದ್ದು ಖಂಡನೆ

ಬೆಂಗಳೂರಿನಲ್ಲಿ ಒಳಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ಬಂಧಿಸಿರುವುದು ಅತ್ಯಂತ ಕಂಡನೀಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೂಡಲೇ ಸರ್ಕಾರ ಬಂಧಿಸಿರುವವರನ್ನು ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ದ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು ಎಂದು ಹೇಳಿದ್ದಾರೆ.

ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ ಎಂದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular