ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕೊಂಡ್ಲಿಕ್ರಾಸ್ ಸಮೀಪ ಕಾರು ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನ ಮುಂಭಾಗದಲ್ಲಿ ಕುಳಿತಿದ್ದ ಇಬ್ಬರು ಕೂಡ ಮೃತಪಟ್ಟಿರುವುದು ಕಂಡುಬಂದಿದೆ.
ಮತ್ತೊಬ್ಬ ವ್ಯಕ್ತಿ ಕಾರಿನ ಹಿಂಬದಿ ಚಕ್ರಕ್ಕೆ ಸಿಲುಕಿದ್ದು ಆತನ ಸ್ಥಿತಿಯೂ ಗಂಭೀರವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.