Tuesday, March 17, 2026
Google search engine
Homeಮುಖಪುಟನಟ ದರ್ಶನ್ ಮೇಲೆ ಚಪ್ಪಲಿ ಎಸೆತ ಪ್ರಕರಣ - ತುಮಕೂರಿನಲ್ಲಿ ಪ್ರತಿಭಟನೆ

ನಟ ದರ್ಶನ್ ಮೇಲೆ ಚಪ್ಪಲಿ ಎಸೆತ ಪ್ರಕರಣ – ತುಮಕೂರಿನಲ್ಲಿ ಪ್ರತಿಭಟನೆ

ಹೊಸಪೇಟೆಯಲ್ಲಿ ನಡೆದ ಕ್ರಾಂತಿ ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ ಸಂದರ್ಭದಲ್ಲಿ ನಟ ದರ್ಶನ್ ಮೇಲೆ ಚಪ್ಪಲಿ ಎಸೆದಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಜಿಲ್ಲಾ ದರ್ಶನ್ ಅಭಿಮಾನಿಗಳ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಚಪ್ಪಲಿ ಎಸೆದ ಆರೋಪಿಯನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಎಂದು ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.ಆರೋಪಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತುಮಕೂರು ಜಿಲ್ಲಾ ದರ್ಶನ್ ಅಭಿಮಾನಿಗಳ ಸಂಘದ ಗಿರೀಶ್, ದರ್ಶನ್ ರವರ ಮೇಲೆ ಚಪ್ಪಲಿ ಎಸೆದ ಆರೋಪಿಯನ್ನು ಬಂಧಿಸಬೇಕು. ಚಪ್ಪಲಿ ಎಸೆದಿರುವುದು ಕನ್ನಡ ನಾಡಿಗೆ ಮಾಡಿದ ಅಪಮಾನ. ಇದರಿಂದ ದರ್ಶನ್ ಅಭಿಮಾನಿಗಳ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಈ ಕೂಡಲೇ ಆರೋಪಿಯನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭಧಲ್ಲಿ ಎಲ್ಲಾ ಕನ್ನಡಪರ ಸಂಘಟನೆಗಳು, ಕನ್ನಡ ಪರ ಸಂಘಟನೆ ಜಿಲ್ಲಾಧ್ಯಕ್ಷ ಶಂಕರ್, ಆನಂದ್, ಎಲ್ಲೇಶ್ ಗೌಡ, ಗಿರೀಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular