Thursday, September 19, 2024
Google search engine
Homeಚಳುವಳಿವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿದ ವಕೀಲರು

ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿದ ವಕೀಲರು

ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಸಾವಿರಾರು ವಕೀಲರು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಿತ್ಯವೂ ಒಂದಲ್ಲ ಒಂದು ಕಾರಣಕ್ಕೆ ವಕೀಲರ ಮೇಲೆ ಹಲ್ಲೆಗಳು ನಡೆಯುತ್ತಿವೆ. ದೌರ್ಜನ್ಯ ನಡೆಯುತ್ತಿದೆ. ಹಾಗಾಗಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಿದರೆ ವಕೀಲರ ರಕ್ಷಣೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ಬೆಳಗಾವಿಯ ಸುವರ್ಣಸೌಧಕ್ಕೆ ಪ್ರವೇಶಿಸಿದಂತೆ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಆದರೂ ವಕೀಲರು ಬ್ಯಾರಿಕೇಢ್ ಗಳನ್ನು ತೆರವುಗೊಳಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಳಗಾವಿ ಚಲೋ ನಡೆಸಿದ ಸಾವಿರಾರು ವಕೀಲರು ತಮಗೆ ರಕ್ಷಣೆ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಚಳಿಗಾಲದ ಅಧಿವೇಶನದಲ್ಲಿಯೇ ವಕೀಲರ ರಕ್ಷಣಾ ಕಾಯ್ದೆಯನ್ನು ಅಂಗೀಕರಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular