Friday, January 30, 2026
Google search engine
Homeಮುಖಪುಟ5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ನೀಡಲು ಯೋಜನೆ ಅನುಷ್ಠಾನ - ಸಿಎಂ ಬಸವರಾಜ ಬೊಮ್ಮಾಯಿ

5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ನೀಡಲು ಯೋಜನೆ ಅನುಷ್ಠಾನ – ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯೋಜ‌ನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಂಬರುವ ಓಲಂಪಿಕ್ ಕ್ರೀಡಾಕೂಟಕ್ಕಾಗಿ ರಾಜ್ಯವು 75 ಜನ ಕ್ರೀಡಾಪಟುಗಳನ್ಬು ಅಣಿಗೊಳಿಸಲು ಪ್ರತಿಭಾವಂತರನ್ನು ದತ್ತು ಪಡೆದು ತರಬೇತಿ ನೀಡುವ ಕಾರ್ಯಕೈಗೊಂಡಿದೆ ಎಂದು ತಿಳಿಸಿದರು.

ಭಾರತ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಆಯೋಜಿಸಿರುವ 26 ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು,

ಯುವಜನರನ್ನು ಸ್ವಯಂ ಉದ್ಯೋಗಿಗಳನ್ನಾಗಿಸಲು ರಾಜ್ಯ ಸರ್ಕಾರವು ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯೋಜನೆ ಜಾರಿಗೊಳಿಸಲಿದೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಪ್ರೇರಣೆಕೊಟ್ಟ ಧೀಮಂತ ಯೋಗಿಯಾಗಿದ್ದಾರೆ. ಧ್ಯಾನ ಮತ್ತು ಜ್ಞಾನವನ್ನು ಯುವಜನರಿಗೆ ಬೋಧಿಸಿದ ಮಹಾನ್ ಚೇತನ ಅವರಾಗಿದ್ದಾರೆ ಎಂದರು.

ಜನಸಂಖ್ಯೆ ಎಂದರೆ ಹೊರೆಯಲ್ಲ, ಅದು ಮಾನವಸಂಪತ್ತು ಅದರ ಸದುಪಯೋಗಪಡಿಸಿಕೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿದ್ದಾರೆ. ಖೇಲೋ ಇಂಡಿಯಾ ಮೂಲಕ ಯುವಜನತೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular