ವಂಚನೆ ಪ್ರಕರಣ, ವರ್ಗಾವಣೆ ದಂಧೆ ಹಾಗೂ ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪದ ಮೇಲೆ ತಲೆ ಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ.
ವಂಚನೆ ಮಾಡಿದ ಆರೋಪದ ಮೇರೆಗೆ ಮೈಸೂರಿನಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪೊಲೀಸರಿಗೆ ಸಿಗದಂತೆ ತಲೆ ಮರೆಸಿಕೊಂಡಿದ್ದರು. ಮೈಸೂರು ಪೊಲೀಸರು ರವಿ ಬಂಧನಕ್ಕಾಗಿ ಶೋಧ ಕಾರ್ಯ ನಡೆಸಿದ್ದರು.
ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಹನ್ನೊಂದು ದಿನಗಳ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.


