ಚೆಕ್ ಬೌನ್ಸ್ ಪ್ರಕರಣದಲ್ಲಿ ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧನದ ನಂತರ ಗುರು ಪ್ರಸಾದ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಎಂಬುವರಿಂದ ಗುರುಪ್ರಸಾದ್ 30 ಲಕ್ಷ ರೂಪಾಯಿಗಳನ್ನು ಸಾಲವಾಗಿ ಪಡೆದುಕೊಂಡಿದ್ದರು. ಸನಿಮಾ ಮಾಡುವುದಾಗಿ ಸಾಲ ಪಡೆದಿದ್ದ ಗುರುಪ್ರಸಾದ್ ನಂತರ ಹಣ ಕೊಡದೇ ವಂಚಿಸಿದ್ದರು ಎಂದು ತಿಳಿದುಬಂದಿದೆ.
ಸಾಲ ಕೊಟ್ಟವರು ಹಣ ಕೇಳುವುದಕ್ಕೆ ಹೋದರೆ ಅವರ ಮೇಲೆಯೇ ಸುಳ್ಳು ಕೇಸನ್ನು ಕೂಡ ದಾಖಲಿಸಿದ್ದರು. ಹಾಗಾಗಿ ಶ್ರೀನಿವಾಸ್ ಅವರು ಗುರುಪ್ರಸಾದ್ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.
ಶ್ರೀನಿವಾಸ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ವಾರೆಂಟ್ ಜಾರಿಯಾಗಿತ್ತು. ಹಾಗಾಗಿ ಗಿರಿನಗರ ಪೊಲೀಸರು ಗುರುಪ್ರಸಾದ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ.


