Wednesday, March 18, 2026
Google search engine
Homeಮುಖಪುಟಆಳುವ ಸರ್ಕಾರಗಳು ಕಾರ್ಪೋರೇಟ್ ಏಜೆಂಟರಂತೆ ವರ್ತಿಸುತ್ತಿವೆ - ಸಿಐಟಿಯು ಕಾರ್ಯದರ್ಶಿ ತಪನ್ ಸೇನ್

ಆಳುವ ಸರ್ಕಾರಗಳು ಕಾರ್ಪೋರೇಟ್ ಏಜೆಂಟರಂತೆ ವರ್ತಿಸುತ್ತಿವೆ – ಸಿಐಟಿಯು ಕಾರ್ಯದರ್ಶಿ ತಪನ್ ಸೇನ್

ದೇಶದ ಆಳುವ ಸರ್ಕಾರಗಳು ನವ ಉದಾರವಾದಿ ನೀತಿಗಳ ಏಜೆಂಟರಂತೆ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಜನರು ದಿವಾಳಿ ಆಗುತ್ತಿದ್ದಾರೆ ಎಂದು ಸಿಐಟಿಯು ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ 17ನೇ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ ದೇಶದ ಮುಖ್ಯ ವಾಹಿನಿ ಮಾಧ್ಯಮಗಳ ದೊಡ್ಡ ವಿಭಾಗವೂ ಇದಕ್ಕೆ ಬೆಂಬಲ ನೀಡುತ್ತಿದೆ. ಇಂತಹ ವಿಷಕಾರಿ ನೀತಿಗಳಿಂದ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿವೆ ಎಂದರು.

ಆಳುವ ಸರ್ಕಾರವು ಜನರ ಒಗ್ಗಟ್ಟನ್ನು ಮುರಿಯುವ ವಿಭಜನಕಾರಿ ನೀತಿಗಳನ್ನು ಹೇರುತ್ತಾ ಸಮಾಜದ ಸಾಮಾಜಿಕ ಸಾಮರಸ್ಯವನ್ನು ಹಾಳುಗೆಡಹುತ್ತಿದೆ. ದೇಶದ ಹಿತಾಸಕ್ತಿಗೆ ಮತ್ತು ದುಡಿಯುವ ವರ್ಗದ ಹಿತಗಳಿಗೆ ವಿರುದ್ಧವಾಗಿ ಇಂತಹ ಕ್ರಿಮಿನಲ್ ದಾಳಿಗಳನ್ನು ನಡೆಸುತ್ತಿರುವ ಸರ್ಕಾರವನ್ನು ರೈತ-ಕಾರ್ಮಿಕ ಚಳುವಳಿಯ ಸಖ್ಯತೆಯೊಂದಿಗೆ ಅಧಿಕಾರದಿಂದ ಕಿತ್ತೆಸೆಯಲಾಗುವುದು ಎಂದರು.

ದೇಶದ ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟವು ಒಂದುಗೂಡಿ ಕಾರ್ಮಿಕರ ಹಕ್ಕುಗಳು, ರೈತರ ಹಕ್ಕುಗಳು ಮಾತ್ರವಲ್ಲ. ದೇಶದ ರಕ್ಷಣೆಗಾಗಿ ದೇಶವಿರೋಧಿ ಕುತಂತ್ರಗಳ ವಿರುದ್ಧ ಹೋರಾಟ ರೂಪಿಸಲಿವೆ ಎಂದು ಹೇಳಿದರು.

ನಾಲ್ಕು ವರ್ಷಗಳ ಹೋರಾಟದ ಅನುಭವವು – ವಿದ್ಯುತ್ – ಕಲ್ಲಿದ್ದಲು ಮುಂತಾದ ಕ್ಷೇತ್ರದಲ್ಲಿ ಸರ್ಕಾರದ ಧೋರಣೆಗಳನ್ನು ಹಿಮ್ಮೆಟ್ಟಿಸಲು ಸಾಧ್ಯ ಹಾಗೂ ಯಾವುದೇ ರಂಗದಲ್ಲೇ ಇರಲಿ ಹಿಮ್ಮೆಟ್ಟಿಸಲು ಸಾಧ್ಯ ಎಂದು ತೋರಿಸಿಕೊಟ್ಟಿದೆ. ನವ ಉದಾರೀಕರಣ ನೀತಿಗಳ ಸವಾಲು ಕೇವಲ ಕಾರ್ಮಿಕ ವರ್ಗಕ್ಕೆ ಮಾತ್ರ ಸೀಮಿತವಲ್ಲ. ಇದು ಇಡೀ ಮನುಕುಲದ ಮುಂದಿನ ಸವಾಲು. ಪ್ರಜಾಸತ್ತಾತ್ಮಕ ಸಮಾಜಕ್ಕೆ ಮಾರಕ ಎಂದು ಆತಂಕ ವ್ಯಕ್ತಪಡಿಸಿದರು.

ಸಿ.ಐಟಿಯು ಅಖಿಲ ಭಾರತ ಅಧ್ಯಕ್ಷೆ ಡಾ. ಕೆ. ಹೇಮಲತಾ ಮಾತನಾಡಿ, ಭಾರತದಲ್ಲಿ ಹೆಚ್ಚುತ್ತಿರುವ ಅಸಮಾನತೆ, ಸಂಪತ್ತಿನ ಕೇಂದ್ರೀಕರಣ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ವರ್ಗದ ಐಕ್ಯ ಹೋರಾಟವನ್ನು ಬಲಗೊಳಿಸಲಾಗುವುದು ಎಂದು ಹೇಳಿದರು.

ಐಎನ್‌ಟಿಯುಸಿ ಮುಖಂಡ ಚಂದ್ರಶೇಖರನ್‌ ಮಾತನಾಡಿ, ಕೇಂದ್ರ ಸರ್ಕಾರ ದೇಶದ ಅರ್ಥ ವ್ಯವಸ್ಥೆಗೆ ತುಂಬಾ ಹಾನಿಯುಂಟು ಮಾಡಿದೆ. ಪ್ರತಿಯೊಂದು ಸಮುದಾಯವನ್ನು ವಿಭಜಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಮಾಡಿದ ಯೋಜನೆಗಳನ್ನು ಸ್ಥಗಿತಗೊಳಿಸಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular