Saturday, October 19, 2024
Google search engine
Homeಮುಖಪುಟರಾಜಕೀಯ ಸವಾಲಿನ ವೃತ್ತಿಯಾದರೂ ತೃಪ್ತಿ ತಂದಿದೆ - ಸಿಎಂ ಬಸವರಾಜ ಬೊಮ್ಮಾಯಿ

ರಾಜಕೀಯ ಸವಾಲಿನ ವೃತ್ತಿಯಾದರೂ ತೃಪ್ತಿ ತಂದಿದೆ – ಸಿಎಂ ಬಸವರಾಜ ಬೊಮ್ಮಾಯಿ

ರಾಜಕೀಯ ವ್ಯಕ್ತಿಯಾಗಿ ಕಷ್ಟದಲ್ಲಿದ್ದವರಿಗೆ ಸ್ಪಂದಿಸುವ ಕೆಲಸದಲ್ಲಿದ್ದೇವೆ. ರಾಜಕೀಯ ಸಾಕಷ್ಟು ಸವಾಲಿನ ವೃತ್ತಿಯಾದರೂ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಆರ್ ವಿ ಡೆಂಟಲ್ ಕಾಲೇಜಿನ ಆಡಿಟೋರಿಯಂನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಮುಖ್ಯ ಮಂತ್ರಿಗಳು ಸಂವಾದ ನಡೆಸಿದ ವಿದ್ಯಾರ್ಥಿ ಜೀವನ, ಜೀವನಾನುಭ, ರಾಜಕೀಯ ವೃತ್ತಿ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ನಿಮ್ಮ ಜೀವನದಲ್ಲಿ ಯಾವ ವೃತ್ತಿ, ಯಾವ ಹಂತ ನಿಮಗೆ ಸಾಕಷ್ಟು ಖುಷಿ ನೀಡಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ವಿದ್ಯಾರ್ಥಿ ಜೀವನವೇ ಉತ್ತಮ. ನಾನು ವಿದ್ಯಾರ್ಥಿಯಾದ ದಿನಗಳನ್ನು ಸಾಕಷ್ಟು ನೆನೆಯುತ್ತೇನೆ. ಕೊನೆ ಬೆಂಚ್‌ನಲ್ಲಿ ಕೂರುವ ವಿದ್ಯಾರ್ಥಿಯ ದಿನಗಳು ಅತ್ಯಂತ ಖುಷಿ ನೀಡಿವೆ ಎಂದು ತಿಳಿಸಿದರು.

ಈ ದೇಶದ ಸಾಧ್ಯತೆಗಳು, ಅವಕಾಶಗಳು ಬೇರೆಯಲ್ಲೂ ಇಲ್ಲ.ನಮ್ಮ ಕರ್ತವ್ಯ ಕಾಲವಿದು ಎಂದು ಪ್ರಧಾನಿ ಹೇಳಿದ್ದಾರೆ. ನಾವು ವಿಜ್ಞಾನ, ತಂತ್ರಜ್ಞಾನದಲ್ಲಿ ಮುಂದಿದ್ದೇವೆ. ಈ ಹಿಂದೆ ಭೂಮಿ ಇದ್ದವರು ಜಗತ್ತನ್ನು ಆಳುತ್ತಿದ್ದರು ಎಂದು ಹೇಳಿದರು.

ಇಂದು ಜ್ಞಾನ ಇದ್ದವರು ಜಗತ್ತನ್ನು ಆಳುತ್ತಿದ್ದಾರೆ. ನಾವು ಜ್ಞಾನದ ಶತಮಾನದಲ್ಲಿದ್ದೇವೆ. ಕರ್ನಾಟಕ ಮತ್ತು ಭಾರತಕ್ಕೆ ದೊಡ್ಡ ಭವಿಷ್ಯವಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular