ತುಮಕೂರು ಜಿಲ್ಲೆಯ ಕ್ರೀಡಾಪಟು ಚಿಕ್ಕತಿಮ್ಮಯ್ಯ ಅವರು ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಶ್ರೀಲಂಕಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಓಪನ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಭರ್ಜಿ ಎಸೆತ ಮತ್ತು ಪೋಲ್ ವಾಲ್ಟ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.
ಚಿಕ್ಕತಿಮ್ಮಯ್ಯ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮದವರಾಗಿದ್ದಾರೆ.
ಚಿಕ್ಕತಿಮ್ಮಯ್ಯ ಅವರನ್ನು ಅಂತಾರಾಷ್ಟ್ರೀಯ ಕ್ರೀಡಾಪಟು ಟಿ.ಕೆ.ಆನಂದ್ ಮತ್ತು ತುಂಬಾಡಿ ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯ್ತಿ ಸಿಬ್ಬಂದಿ ಅಭಿನಂದಿಸಿದ್ದಾರೆ.