ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಎನ್ನುವುದು ಇಡೀ ದೇಶಕ್ಕೇ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು. ಕಾಂಗ್ರೆಸ್ ಪಕ್ಷದವರು, ಮಹಿಳೆಯರಿಗೆ 2 ಸಾವಿರ ರೂಗಳನ್ನು ಘೋಷಣೆ ಮಾಡಿದ್ದಾರೆ. ಈ ಮಾನದಂಡ ಹಾಕಿದರೆ ಅವರೂ ಕೂಡ ಅಪರಾಧಿಗಳಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನ 4-5 ಶಾಸಕರು ತಮ್ಮ ಚಿತ್ರವುಳ್ಳ ಕುಕ್ಕರ್ ಗಳನ್ನು ಮತದಾರರಿಗೆ ಕೊಟ್ಟಿರುವುದು ಸಾಕ್ಷಿ ಸಮೇತ ದೊರೆತಿದೆ. ಕುಣಿಗಲ್ ನಲ್ಲಿ ಸಿಕ್ಕಿದೆ. ವಾಣಿಜ್ಯ ತೆರಿಗೆ ಇಲಾಖೆಯವರು ಹಿಡಿದು 4 ಜನರಿಗೆ ದಂಡ ಹಾಕಿದ್ದಾರೆ. ಈ ಬಗ್ಗೆ ಸಮಗ್ರ ಮಾಹಿತಿ ಪಡೆದು ತನಿಖೆ ಮಾಡಿಸುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ಸಿನವರ ಎಲೆಯಲ್ಲಿ ಇಷ್ಟೆಲ್ಲ ಇಟ್ಟುಕೊಮಡು ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಸೋಲುತ್ತೇವೆ ಎನ್ನುವುದು ಅವರಿಗೆ ಖಚಿತವಾಗಿದೆ. ಆದ್ದರಿಂದ ಇಂತಹ ಆರೋಪಗಳನ್ನು ನಮ್ಮ ಮೇಲೆ ಮಾಡುತ್ತಿದ್ದಾರೆ ಎಂದರು.