Friday, October 18, 2024
Google search engine
Homeಮುಖಪುಟಜೆಡಿಎಸ್ ಅಧಿಕಾರಕ್ಕೆ ಬಂದರೆ ಮನೆ ಮನೆಗೆ ನೀರು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮನೆ ಮನೆಗೆ ನೀರು

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ 53ನೇ ದಿನವೂ ಮುಂದುವರಿಯಿತು.

ಉತ್ತರ ಕರ್ನಾಟಕ ಭಾಗದಲ್ಲಿ ಯಾತ್ರೆ ನಡೆಸುತ್ತಿರುವ ಕುಮಾರಸ್ವಾಮಿ ಸೋಮವಾರ ಲಿಂಗಸುಗೂರು ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸಿದ್ದಾರೆ.

ರಾಯಚೂರು ಸಂಸದರ ಹುಟ್ಟೂರು ಗುರುಗುಂಡಾ ಗ್ರಾಮದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆಯೇ ಮಹಿಳೆಯರು ಖಾಲಿ ಕೊಡಗಳನ್ನಿಡಿದುಕೊಂಡು ಧರಣಿಯನ್ನು ಎದುರಿಸಬೇಕಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನೋವಿನ ಸಂಗತಿ ಎಂದರೆ ಸಂಸದರ ಊರಿನಲ್ಲಿಯೇ ಶುದ್ದ ಕುಡಿಯುವ ನೀರಿಲ್ಲ. ಹಾಹಾಕಾರ ಪರಿಸ್ಥಿತಿ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ ತಪ್ಪದೇ ಮನೆಮನೆಗೂ ನೀರು ಪೂರೈಕೆ ಮಾಡುವ ವ್ಯವಸ್ಥೇ ಮಾಡಲಾಗುವುದು ಎಂದು ಮಹಿಳೆಯರಿಗೆ ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular