ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಬೆಸ್ಕಾಂ ಕಚೇರಿಯ ನಿವಾಸದಲ್ಲಿ ಲೈನ್ ಮನ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೊರಟಗೆರೆ ತಾಲ್ಲೂಕಿನ ಮಲಪನಹಳ್ಳಿಯ ನಿವಾಸಿ ನಾಗಭೂಷಣ್ ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ನಾಗಭೂಷಣ್ ಅವರಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲ ಪತ್ನಿ ರಾಮಕ್ಕ ಮಲಪನಹಳ್ಳಿಯಲ್ಲಿ ವಾಸವಾಗಿದ್ದರು. ರಾಮಕ್ಕನಿಗೆ ಮಕ್ಕಳಿರಲಿಲ್ಲ ಎನ್ನಲಾಗಿದೆ.
ಎರಡನೇ ಪತ್ನಿಯನ್ನು ಹೆರಿಗೆಗೆ ಗೌರಿಬಿದನೂರಿಗೆ ಕಳುಹಿಸಿದ್ದು ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.


