Monday, March 16, 2026
Google search engine
Homeಮುಖಪುಟದೆಹಲಿಯ ಬಿಬಿಸಿ ಕಚೇರಿ ಮೇಲಿನ ಐಟಿ ಸರ್ವೆಗೆ ಬೆಂಗಳೂರು ಪ್ರೆಸ್ ಕ್ಲಬ್ ಖಂಡನೆ

ದೆಹಲಿಯ ಬಿಬಿಸಿ ಕಚೇರಿ ಮೇಲಿನ ಐಟಿ ಸರ್ವೆಗೆ ಬೆಂಗಳೂರು ಪ್ರೆಸ್ ಕ್ಲಬ್ ಖಂಡನೆ

ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಪ್ರತಿಯೊಬ್ಬರಿಗೂ ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದ್ದು ಬಿಬಿಸಿ ಕಚೇರಿಯ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಎಂದು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ಖಂಡಿಸಿದ್ದಾರೆ.

ವಿಶೇಷವಾಗಿ ಮಾಧ್ಯಮಗಳು ಸ್ವತಂತ್ರವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತ ಸಮಾಜವನ್ನು ಸರಿದಾರಿಯಲ್ಲಿ ನಡೆಯಲು ಸಹಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

ಅಂತಹದರಲ್ಲಿ ಇದೀಗ ಪ್ರತಿಷ್ಠಿತ ಬಿಬಿಸಿ ಮಾಧ್ಯಮ ದೆಹಲಿ ಕಚೇರಿ ಮೇಲೆ ಐ.ಟಿ. ಸರ್ವೆ ಮಾಡಿರುವುದು ತೀವ್ರ ಖಂಡನೀಯ. ಕಾರ್ಯಕ್ರಮವೊಂದನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂಬುದು ಇಲ್ಲಿ ಸ್ವಷ್ಟವಾಗುತ್ತದೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ತಿಳಿಸಿದ್ದಾರೆ.

ಮಾಧ್ಯಮಗಳನ್ನು ಹತ್ತಿಕ್ಕಲು ನಡೆಯುವಂತ ಇಂತಹ ಪ್ರಯತ್ನಗಳನ್ನು ಬೆಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಬಿ.ಪಿ. ಮಲ್ಲಪ್ಪ ತೀವ್ರವಾಗಿ ಖಂಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular