Monday, March 16, 2026
Google search engine
Homeಮುಖಪುಟಮಾಜಿ ಶಾಸಕ ಸುರೇಶ್ ಗೌಡರನ್ನು ಗೆಲ್ಲಿಸಲು ಸಿಎಂ ಮನವಿ

ಮಾಜಿ ಶಾಸಕ ಸುರೇಶ್ ಗೌಡರನ್ನು ಗೆಲ್ಲಿಸಲು ಸಿಎಂ ಮನವಿ

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಉತ್ತಮ‌ ಕೆಲಸ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಅವರ ಗೆಲುವಿಗೆ ಶ್ರಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಬೆಂಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಸುರೇಶಗೌಡ ನೇತೃತ್ವದ ತುಮಕೂರು ಗ್ರಾಮಾಂತರ ಕ್ಷೇತ್ರದ ಮುಖಂಡರಿಗೆ ತಿಳಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಸುರೇಶ್ ಗೌಡ ಒಳ್ಳೆಯ ಕೆಲಸಗಾರರಾಗಿದ್ದಾರೆ ಎಂದು ಶ್ಲಾಘಿಸಿದರು.

ಅವರು ಸದಾ ಜನರ ಪರವಾಗಿ ಕೆಲಸ ಮಾಡುವ ವ್ಯಕ್ತಿಯಾಗಿದ್ದು, ಕೆಲಸದ ಆಧಾರದಲ್ಲಿ ಚುನಾವಣೆಗಳು ನಡೆಯುವುದಾದರೆ ಸುರೇಶಗೌಡ ಅವರು ಸೋಲುವುದಿಲ್ಲ ಎಂದರು.

ಆದರೆ ರಾಜಕೀಯದಲ್ಲಿ ಏರುಪೇರುಗಳಾಗುತ್ತವೆ. ಈ ಬಾರಿ ಚುನಾವಣೆಯಲ್ಲಿ ಸುರೇಶ್ ಗೌಡ ಅವರು ಗೆಲ್ಲುತ್ತಾರೆ ಎಂಬ ವರದಿಗಳಿವೆ‌. ಎಲ್ಲರೂ ಸೇರಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular