ಶಿವಸೇನೆ ಪಕ್ಷದ ಹೆಸರು, ಅದರ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಖರೀದಿಸಲು ಇಲ್ಲಿಯವರೆಗೆ 2000 ಕೋಟಿ ರೂಪಾಯಿಗಳ ಒಪ್ಪಂದ ನಡೆದಿದೆ ಎಂದು ಶಿವಸೇನೆ (ಉದ್ದವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.
ಆದಾಗ್ಯೂ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿಬಿರದ ಶಾಸಕ ಸದಾ ಸರ್ವಂಕರ್ ಅವರು ಈ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ. ಸಂಜಯ್ ರಾವುತ್ ಕ್ಯಾಷಿಯರ್ ಆಗಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ರಾಜ್ಯಸಭಾ ಸದಸ್ಯರು ಅವರ ಹಕ್ಕು ಪುರಾವೆಯಿಂದ ಬೆಂಬಲಿತವಾಗಿದೆ ಎಂದು ಅವರು ಶೀಘ್ರದಲ್ಲೇ ಬಹಿರಂಗಪಡಿಸುತ್ತಾರೆ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗವು ಶುಕ್ರವಾರ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಗುರುತಿಸಿದೆ ಮತ್ತು ಅದಕ್ಕೆ ಬಿಲ್ಲು ಮತ್ತು ಬಾಣ ಚುನಾವಣಾ ಚಿಹ್ನೆಯನ್ನು ನಿಗದಿಪಡಿಸಲು ಆದೇಶಿಸಿದೆ.
ಸಂಘಟನೆಯ ನಿಯಂತ್ರಣಕ್ಕಾಗಿ ಸುದೀರ್ಘ ಹೋರಾಟದ ಕುರಿತು 78 ಪುಟಗಳ ಆದೇಶದಲ್ಲಿ ಉದ್ದವ್ ಠಾಕ್ರೆ ಬಣವು ರಾಜ್ಯದಲ್ಲಿ ವಿಧಾನ ಸಭಾ ಉಪಚುನಾವಣೆ ಪೂರ್ಣಗೊಳ್ಳುವವರೆಗೆ ತನಗೆ ನಿಗದಿಪಡಿಸಿದ ಜ್ವಾಲೆಯ ಜ್ಯೋತಿ ಚುನಾವಣಾ ಚಿಹ್ನೆಯನ್ನು ಇಟ್ಟುಕೊಳ್ಳಲು ಚುನಾವಣಾ ಆಯೋಗ ಅನುಮತಿಸಿದೆ.
ಶಿವಸೇನೆ ಹೆಸರನ್ನು ಖರೀದಿಸಲು 2 ಸಾವಿರ ಕೋಟಿ ರೂಪಾಯಿಗಳು ಸಣ್ಣ ಮೊತ್ತವಲ್ಲ ಎಂದು ರಾವುತ್ ಭಾನುವಾರ ಹೇಳಿದ್ದಾರೆ. ಚುನಾವಣಾ ಆಯೋಗದ ನಿರ್ಧಾರವು ಒಪ್ಪಂದವಾಗಿದೆ ಎಂದು ಆರೋಪಿಸಿದ್ದಾರೆ.
ಶಿವಸೇನೆ ಹೆಸರು ಮತ್ತು ಅದರ ಚಿಹ್ನೆಯನ್ನು ಪಡೆಯಲು 2000 ಕೋಟಿ ರೂಪಾಯಿಗಳ ಡೀಲ್ ನಡೆದಿದೆ ಎಂಬ ವಿಶ್ವಾಸಾರ್ಹ ಮಾಹಿತಿ ನನ್ನ ಬಳಿ ಇದೆ. ಇದು ಪ್ರಾಥಮಿಕ ಅಂಕಿಅಂಶವಾಗಿದೆ ಮತ್ತು 100 ಪ್ರತಿಶತ ಸತ್ಯವಾಗಿದೆ. ಶೀಘ್ರದಲ್ಲೇ ಹಲವು ವಿಷಯಗಳು ಬಹಿರಂಗಗೊಳ್ಳಲಿವೆ. ಹಿಂದೆಂದು ದೇಶದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ ಎಂದು ರಾವುತ್ ಟ್ವಟ್ ಮಾಡಿದ್ದಾರೆ.


