ಮಾಜಿ ಶಾಸಕ ಡಾ.ರಫೀಕ್ ಅಹಮದ್ ಅವರಿಗೆ ಪಕ್ಷದ ಟಿಕೆಟ್ ನೀಡಬೇಕೆಂದು ತುಮಕೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಮಹಾನಗರ ಪಾಲಿಕೆಯ ಮೇಯರ್ ಪ್ರಭಾವತಿ, ಸದಸ್ಯರಾದ ಮಹೇಶ್ ಕುಮಾರ್, ಕುಮಾರ್, ಸೈಯದ್ ನಯಾಜ್, ನೂರುನ್ನೀಸಾ ಬಾನು, ಶಕೀಲ್ ಅಹಮದ್ ಷರೀಫ್, ಫರೀದ ಬೇಗಂ, ನಾಸಿರಾ ಬಾನು, ಇನಾಯಾತ್ ಉಲ್ಲಾಖಾನ್, ಮುಜೀದಾ ಖಾನಂ ಹಾಗೂ ರೂಪಶ್ರೀ ಶೆಟ್ಟಳ್ಳಯ್ಯ ಅವರು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದಾರೆ.
ಮಾಜಿ ಶಾಸಕ ಡಾ.ರಫೀಕ್ ಅಹಮದ್ ಅವರು ತುಮಕೂರು ನಗರದ ಅಭಿವೃದ್ಧಿ ದೃಷ್ಟಿಕೋನವುಳ್ಳವರಾಗಿದ್ದು, ಅವರಿಗೆ ಟಿಕೆಟ್ ನೀಡುವಂತೆ ಒಮ್ಮತದಿಂದ ಒತ್ತಾಯಿಸಿರುವ ಸದಸ್ಯರು ಹೊರಗಿನವರಿಗೆ ಟಿಕೆಟ್ ನೀಡಬಾರದು ಎಂದು ಮನವಿ ಮಾಡಿದ್ದಾರೆ.


