ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕಿತ್ತಾಡಿಕೊಂಡು ಸುದ್ದಿ ಮಾಡಿದ್ದ ಇಬ್ಬರು ಮಹಿಳಾ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದರೂ ಸ್ಥಳ ನಿಯೋಜನೆ ಮಾಡಿಲ್ಲ.
ಐಪಿಎಸ್ ಅಧಿಕಾರಿ ಡಿ. ರೂಪಾ ಕರಕುಶಲ ಅಭಿವೃದ್ದಿ ನಿಗಮದ ವ್ಯವಸ್ಥಾಪಕರಾಗಿದ್ದರು. ರೋಹಿಣಿ ಸಿಂಧೂರಿ ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇವರಿಬ್ಬರೂ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿ ಸರ್ಕಾರಕ್ಕೆ ಮುಜುಗರ ತಂದ ಹಿನ್ನೆಲೆಯಲ್ಲಿ ಇಬ್ಬರನ್ನು ವರ್ಗಾವಣೆ ಮಾಡಿದ್ದರೂ ಸ್ಥಳ ನಿಯೋಜನೆ ಮಾಡದೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಅಲ್ಲದೆ ಐಎಎಸ್ ಅಧಿಕಾರಿ ಮೌನಿಷ್ ಮೌದ್ಗಿಲ್ ಅವರನ್ನೂ ಸಹ ವರ್ಗಾವಣೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ರೂಪಾ ಮೌದ್ಗಿಲ್ ಹಾಗೂ ರೋಹಿಣಿ ಸಿಂಧೂರಿ ಅವರ ನಡುವಿನ ಕಿತ್ತಾಟ ತಾರಕಕ್ಕೇರಿತ್ತು.


