ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.
ಬಿಜೆಪಿಯ ಹಾಲಿ ಶಾಸಕ ಜ್ಯೋತಿಗಣೇಶ್ ಮಾಧ್ಯಮಗಳೊಂದಿಗೆ ಮಾತನಾಡಿದ 2 ದಿನದ ನಂತರ ಸೊಗಡು ಶಿವಣ್ಣ ನನಗೆ ಟಿಕೆಟ್ ಖಚಿತ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆ ಇದೆ. ಪಕ್ಷದ ನಾಯಕರು ಮತ್ತು ತುಮಕೂರು ನಗರದ ಜನತೆ ನನ್ನ ಪರವಾಗಿದ್ದಾರೆ ಎಂದು ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸೊಗಡು ಶಿವಣ್ಣ, ನಾನು ಜನಸಂಘದಿಂದ ಬಂದಿದ್ದೇನೆ. ನಾಲ್ಕು ಶಾಸಕರಾಗಿ ಆಯ್ಕೆಯಾಗಿದ್ದೇನೆ. ಸಚಿವರಾಗಿಯೂ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಯಾರು ಏನೇ ಹೇಳಿದರೂ ನಾನು ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ. ಇದರಲ್ಲಿ ಅನುಮಾನವೇ ಬೇಡ. ನನ್ನ ಹಿತೈಷಿಗಳು ನನಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಹಾಗಾಗಿ ಪಕ್ಷದ ಟಿಕೆಟ್ ನನಗೆ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಕೆಲವು ದಿನಗಳ ನಂತರ ಎನ್.ಆರ್.ಕಾಲೋನಿಯಿಂದ ಮತ ಯಾಚನೆ ಮಾಡುತ್ತೇನೆ. ನನ್ನ ಚುನಾವಣೆಯ ಖರ್ಚು ವೆಚ್ಚವನ್ನು ನನ್ನ ಬೆಂಬಲಿಗರೇ ನೋಡಿಕೊಳ್ಳುತ್ತಾರೆ ಎಂದು ತಿಳಿಸಿದರು.


