ನ್ಯಾಯಾಲಯವು ತನ್ನ ಆದೇಶವನ್ನು ಪ್ರಕಟಿಸುವವರೆಗೆ ಅದಾನಿ ಹಿಂಡೆನ್ ಬರ್ಗ್ ವಿಷಯದ ಕುರಿತು ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಹಿಂಡೆನ್ ಬರ್ಗ್ ರಿಸರ್ಚ್ ನ ವಂಚನೆ ಆರೋಪಗಳಿಂದ ಪ್ರಚೋದಿಸಲ್ಪಟ್ಟ ಇತ್ತೀಚಿನ ಅದಾನಿ ಗ್ರೂಪ್ ಷೇರುಗಳ ಕುಸಿತದ ಕುರಿತು ಪಿಐಎಲ್ ಗಳ ಬ್ಯಾಚ್ ನಲ್ಲಿ ಫೆಬ್ರವರಿ 20ರಂದು ಸುಪ್ರಿಂಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಈ ವಿಷಯವನ್ನು ಪ್ರಸ್ತಾಪಿಸಿದ ವಕೀಲ ಎಂ.ಎಲ್.ಶರ್ಮಾ ಅವರ ಮನವಿಯನ್ನು ತಿರಸ್ಕರಿಸಿತು.
ನಾವು ಮಾಧ್ಯಮಗಳಿಗೆ ಯಾವುದೇ ತಡೆಯಾಜ್ಞೆ ನೀಡುವುದಿಲ್ಲ ಎಂದು ನ್ಯಾಯಮೂರ್ಥಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ಪೀಠ ಹೇಳಿದೆ.
ನಾವು ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಬಯಸುವ ಕಾರಣ ನಾವು ನಿಮ್ಮ ಮುಚ್ಚಿದ ಕವರ್ ಸಲಹೆಯನ್ನು ಸ್ವೀಕರಿಸುವುದಿಲ್ಲ ಎಂದು ಪೀಠ ಹೇಳಿದೆ.


