Monday, March 16, 2026
Google search engine
Homeಮುಖಪುಟಅರ್ಕಾವತಿ ಬಡಾವಣೆ ಪ್ರಕರಣ - ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ - ಸಿಎಂ ಬಸವರಾಜ ಬೊಮ್ಮಯಿ

ಅರ್ಕಾವತಿ ಬಡಾವಣೆ ಪ್ರಕರಣ – ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ – ಸಿಎಂ ಬಸವರಾಜ ಬೊಮ್ಮಯಿ

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಸಿಎಂ.ಸುಳ್ಳು ಹೇಳಿದ್ದಾರೆ ಎಂಬ ಆರೋಪಕ್ಕೆ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಕೆಂಪಣ್ಣ ಅವರ ಆಯೋಗವು ಸುದೀರ್ಘವಾಗಿ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ತನಿಖೆ ನಡೆಸಿದ ವರದಿಯನ್ನು ನಾನು ಓದಿದ್ದೇನೆ. ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರು ಸುಳ್ಳು ಹೇಳುತ್ತಿದ್ದಾರೆ ಎಂದು ಸುದ್ದಿ ಟಿವಿ ಫೇಸ್ಬುಕ್ ನಲ್ಲಿ ಬರೆಯಲಾಗಿದೆ.

ಅಧಿಕಾರಿಗಳು ಕಡತ ತಂದರು ಅನುಮೋದಿಸಿದೆ ಎಂದು ಬರೆದಿರುವುದಾಗಿ ಅವರೇ ಹೇಳಿರುವುದರ ಅರ್ಥ, ತಪ್ಪು ಮಾಡಿರುವುದನ್ನು ಒಪ್ಪಿಕೊಂಡಂತೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ ಎಂದರು.

ಅಡ್ವೊಕೇಟ್ ಜನರಲ್ ಬಗ್ಗೆ ಹೇಳಿದ್ದು, ಅವರ ವಾದದ ನಂತರ ನ್ಯಾಯಮೂರ್ತಿಗಳು ಏನು ಹೇಳಿದ್ದಾರೆ ಎನ್ನುವುದು ಮುಖ್ಯ. ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳ ಭ್ರಷ್ಟಾಚಾರವನ್ನು ರಕ್ಷಿಸಲು ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಅದನ್ನೇ ನಾನು ಹೇಳಿದ್ದು ಎಂದಿದ್ದಾರೆ.

ತೀರ್ಪು ಹಾಗೂ ಆಯೋಗದ ವರದಿಯನ್ನು ನಾನು ಓದಿದ್ದು. ಈಗಾಗಲೇ ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಇನ್ನು ಮುಂದೆ ನಾವೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular