Monday, March 16, 2026
Google search engine
Homeಮುಖಪುಟಮೈಸೂರು ಭಾಗದ ಬಿಜೆಪಿ ನಾಯಕರಿಗೆ ಗಂಡಸ್ತನ ಇಲ್ಲ - ಸಿಎಂ ಇಬ್ರಾಹಿಂ

ಮೈಸೂರು ಭಾಗದ ಬಿಜೆಪಿ ನಾಯಕರಿಗೆ ಗಂಡಸ್ತನ ಇಲ್ಲ – ಸಿಎಂ ಇಬ್ರಾಹಿಂ

ಹಳೆ ಮೈಸೂರು ಭಾಗದ ಬಿಜೆಪಿ ನಾಯಕರಿಗೆ ಗಂಡಸ್ತನ ಇಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕರೆಸಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಹೇಳಿಕೆ ನೀಡಿದ ಅವರು, ಸ್ಥಳೀಯ ಬಿಜೆಪಿ ನಾಯಕರಿಗೆ ಶಕ್ತಿ ಇಲ್ಲ. ಮೇಲ್ಗಡೆಯಿಂದ ಬಂದು ಇವರಿಗೆ ಇಂಜಕ್ಷನ್ ಕೊಡುತ್ತಿದ್ದಾರೆ ಅಷ್ಟೇ. ಇವರೆಲ್ಲಾ ಗಟ್ಟಿಯಾಗಲಿ ಅಂತಾ ಡೆಲ್ಲಿಯಿಂದ ಬಂದು ಇವರಿಗೆ ಚುಚ್ಚುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ ನಂತರ ಕೆಲವು ಶಾಸಕರು ಕೋರ್ಟ್​ನಿಂದ ಸ್ಟೇ ಆರ್ಡರ್ ತಂದಿದ್ದರು. ಈ ಬಗ್ಗೆ ಮಾತನಾಡಿದ ಸಿ.ಎಂ. ಇಬ್ರಾಹಿಂ, 12 ಮಂದಿ ನಿಮ್ಮ ಶಾಸಕರು ಯಾಕೆ ಕೋರ್ಟ್​​ನಿಂದ ಸ್ಟೇ ತಗೊಂಡಿದ್ದಾರೆ ಎಂದು ಕೇಳಬೇಕು. ಅದ್ಯಾರೋ ಆಹಾರ ಸಚಿವ ಇದಾರಲ್ಲ ದಪ್ಪವಾಗಿ, ಅವರು ಹೇಳುತ್ತಾರೆ ನಾನು ಯಾವುದೇ ಸ್ಟೇ ತೆಗೆದುಕೊಂಡಿಲ್ಲ ಅಂತ. ಪಾಪ ಅವರ ಕೈಯಲ್ಲಿ ಏನಾಗುತ್ತೆ ಏನು ಆಗುವುದಿಲ್ಲ ಎಂದು ಪರೋಕ್ಷವಾಗಿ ಸಚಿವ ಗೋಪಾಲಯ್ಯ ಅವರಿಗೆ ಟಾಂಗ್ ಕೊಟ್ಟರು.

ಇವರ ದಡಕ ಬಡಕ ಆಟ ನಮಗೆ ಗೊತ್ತಿಲ್ವ? ಮಾಜಿ ಸಚಿವರೂ ಆಗಿರುವ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದೇ ತೋಟದ ಹೂವಿದ್ದಂತೆ. ಅವರ ಬಗ್ಗೆ ಜಾಸ್ತಿ ಮಾತನಾಡುವುದಿಲ್ಲ ಎಂದು ಸುದ್ದಿ ಟಿವಿ ಫೇಸ್ಬುಕ್ ಪೇಜಿನಲ್ಲಿ ಬರೆಯಲಾಗಿದೆ.

ಒಕ್ಕಲಿಗರ ಪ್ರಾಬಲ್ಯವೇ ಹೆಚ್ಚಾಗಿರುವ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಅಷ್ಟಾಗಿ ಜನ ಬೆಂಬಲವಿಲ್ಲ. ಉಸ್ತುವಾರಿ ಸಚಿವರಾಗಿ ಗೋಪಾಲಯ್ಯ ನೇಮಕವಾದ ನಂತರ ಸಂಘಟನೆ ಚುರುಕುಗೊಳಿಸಲು ಹಲವು ಹಂತಗಳಲ್ಲಿ ಕ್ರಮ ತೆಗೆದುಕೊಳ್ಳಲಾಗಿತ್ತು. ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸ್ವಲ್ಪ ಹುರುಪಾಗಿ ಓಡಾಡಲು ಆರಂಭಿಸಿದ್ದರು. ಮಾತ್ರವಲ್ಲದೆ ಈ ಭಾಗವನ್ನೇ ಟಾರ್ಗೆಟ್ ಮಾಡಿರುವ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ನಾನಾ ತಂತ್ರಗಳು, ಟಾಸ್ಕ್‌ಗಳನ್ನ ಹೆಣೆದು ವ್ಯೂಹವನ್ನೇ ರಚಿಸಿದ್ದಾರೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular