ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಫೋಟೋ ಹಾಕಿ ಪೇ ಎಂಎಲ್ಎ ಅಂತ ಪೋಸ್ಟರ್ ಮುದ್ರಿಸಿ ತನ್ನ ಕಚೇರಿ ಸಮೀಪದಲ್ಲೇ ಬಸ್ ನಿಲುಗಡೆ ಹಾಗೂ ಗೋಡೆಗಳ ಮೇಲೆ ಅಂಟಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಶಶಿ ಹುಲಿಕುಂಟೆ ಮಠ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಶಶಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಈ ರೀತಿ ಪೋಸ್ಟರ್ ಅಂಟಿಸುವುದನ್ನು ಸಾರ್ವಜನಿಕ ಸ್ಥಳಗಳನ್ನು ಅಂದಗೆಡಿಸಿದ ಆರೋಪದ ಮೇಲೆ ಕೇಸ್ ಹಾಕಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಬಹುದಿತ್ತು, ಆದರೆ ಹಲ್ಲೆ ಆಪಾದನೆ ಮೇಲೆ ಎಫ್ಐಆರ್ ದಾಖಲಿಸಿ, ಜಾಮೀನು ರಹಿತ ಮಾಡಿ ಜೈಲಿಗೆ ಹೋಗುವಂತೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.


