ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಫೋಟೋ ಹಾಕಿ ಪೇ ಎಂಎಲ್ಎ ಅಂತ ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕಾಂಗ್ರೆಸ್ ಮುಖಂಡ ಶಶಿ ಹುಲಿಕುಂಟೆ ಮಠ್ ಅವರಿಗೆ ಮೂರನೇ ಅಧಿಕ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯ ಇಂದು ಜಾಮೀನು ನೀಡಿದೆ.
ಮೂರನೇ ಅಧಿಕ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಅವರು ಶಶಿ ಹುಲಿಕುಂಟೆ ಮಠ್ ಅವರಿಗೆ ಜಾಮೀನು ನೀಡಿದ್ದಾರೆ.
ಶಶಿ ಹುಲಿಕುಂಟೆ ಮಠ್ ಅವರ ಪರವಾಗಿ ವಕೀಲ ಮಹಾವೀರ್ ಜೈನ್ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಧೀಶರು, ಶಶಿ ಅವರ ಸಲ್ಲಿಸಿದ ಜಾಮೀನು ಅರ್ಜಿಯನ್ನು ಪುರಸ್ಕರಿಸಿ ಜಾಮೀನು ನೀಡಿದ್ದಾರೆ.


