ಅಬಕಾರಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ನ್ಯಾಯಾಲಯ ಮಾರ್ಚ್ 4ರ ವರೆಗೆ ಕೇಂದ್ರ ತನಿಖಾ ಸಂಸ್ಥೆಯ ವಶಕ್ಕೆ ನೀಡಿದೆ.
ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ ವಾಲ್ ಅವರು ಸಿಸೋಡಿಯಾ ಅವರನ್ನು ಕಸ್ಟಡಿಯಲ್ಲಿ ವಿಚಾರಣೆಗೆ ಒಳಪಡಿಸಲು ಸಿಬಿಐ ಸಲ್ಲಿಸಿದ ಮನವಿಯನ್ನು ಅಂಗೀಕರಿಸಿದರು.
ಇದಕ್ಕೂ ಮೊದಲು ಸಿಬಿಐ ಮತ್ತು ಸಿಸೋಡಿಯಾ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿತ್ತು.
2021-22ಕ್ಕೆ ಈಗ ರದ್ದಾದ ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಸಂಜೆ ಸಿಸೋಡಿಯಾ ಅವರನ್ನು ಬಂಧಿಸಿತ್ತು.


