ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ 2023ರ ವಿಧಾನ ಸಭಾ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಾನು 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಏಕೆಂದರೆ ನಾನು ರಾಜಕೀಯದಿಂದ ದಣಿದಿದ್ದೇನೆ ಮತ್ತು ವಿಶ್ರಾಂತಿಯ ಅಗತ್ಯವಿದೆ ಎಂದಿದ್ದಾರೆ.
ಆದರೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸಾಮಾನ್ಯ ಕಾರ್ಯಕರ್ತರನನ್ನು ಕಣಕ್ಕಿಳಿಸುತ್ತೇನೆ ಎಂದು ಹೇಳಿದ್ದು, ಸಕ್ರಿಯ ರಾಜಕಾರಣವನ್ನು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.


