ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಮಂಗಳವಾರ ಸುಪ್ರೀಂ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಪ್ರಸ್ತುತ ಸಿಬಿಐ ವಶದಲ್ಲಿರುವ ಸಿಸೋಡಿಯಾ ಪರವಾಗಿ ಹಿರಿಯ ವಕೀಲ ಎ.ಎಂ.ಸಿಂಘ್ವಿ ಅವರು ಸಲ್ಲಿಸಿರುವ ಅರ್ಜಿಗಳನ್ನು ಗಮನಿಸಿದೆ. ಇಂದು ಮಧ್ಯಾಹ್ನ 3.50ಕ್ಕೆ ಮನವಿಯನ್ನು ಆಲಿಸಲು ಒಪ್ಪಿಗೆ ನೀಡಿದೆ.
ಜೈಲಿನಲ್ಲಿರುವ ಎಎಪಿ ನಾಯಕನಿಗೆ ಕ್ರಿಮಿನಲ್ ಪ್ರೊಸಿಜರ್ ಕೋಡ ಅಡಿಯಲ್ಲಿ ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಗೆ ತೆರಳಲು ಮತ್ತು ಎಫ್ಐಆರ್ ರದ್ದುಗೊಳಿಸುವಂತೆ ಕೋರಲು ಪರಿಹಾರಗಳಿವೆ ಎಂದು ಸುಪ್ರೀಂಕೋರ್ಟ್ ಗಮನಿಸಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.


