Tuesday, March 17, 2026
Google search engine
Homeಮುಖಪುಟಮೈಸೂರು - ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿದ ಶಾಸಕ ತನ್ವೀರ್ ಸೇಠ್

ಮೈಸೂರು – ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿದ ಶಾಸಕ ತನ್ವೀರ್ ಸೇಠ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯದಿಂದ ನಿವೃತ್ತಿ ಬಯಸಿ ಮೈಸೂರು ಶಾಸಕ ತನ್ವಿರ್ ಸೇಠ್ ಎಐಸಿಸಿಗೆ ಪತ್ರ ಬರೆದಿದ್ದಾರೆ. ಇದು ಚುನಾವಣೆಯಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿರುವ ಕಾಂಗ್ರೆಸ್‌ಗೆ ದೊಡ್ಡ ಶಾಕ್ ಆಗಿದೆ.

ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದರೆ ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular