Monday, March 16, 2026
Google search engine
Homeಮುಖಪುಟಕಾಂಗ್ರೆಸ್ ಸೇರ್ಪಡೆ ಅಧಿಕೃತ ಘೋಷಿಸಿದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ

ಕಾಂಗ್ರೆಸ್ ಸೇರ್ಪಡೆ ಅಧಿಕೃತ ಘೋಷಿಸಿದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ

ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಮಾರ್ಚ್ 5 ರಂದು ಅರಸೀಕೆರೆ ತಾಲೂಕಿನ ಗುತ್ತಿನಗೆರೆ ಗ್ರಾಮದಲ್ಲಿ ಆಯೋಜಿಸಿರುವ ಸಂಗೊಳ್ಳಿರಾಯಣ್ಣ ಪ್ರತಿಮೆ ಉದ್ಘಾಟನೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಲಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳುವುದಾಗಿ ಹೇಳಿದ್ದಾರೆ.

ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಬಗ್ಗೆ ಪದೇ ಪದೇ ಸ್ಪಷ್ಟನೆ ನೀಡಿದ್ದ ಶಿವಲಿಂಗೇಗೌಡ, ಜೆಡಿಎಸ್ ನಾಯಕರೊಂದಿಗೆ ಭಿನ್ನಾಭಿಪ್ರಾಯ ಇರುವುದು ನಿಜ. ಆದರೆ ಅಂತಿಮವಾಗಿ ನಮ್ಮ ಕ್ಷೇತ್ರದ ಜನರು, ಬೆಂಬಲಿಗರು, ಅಭಿಮಾನಿಗಳ ಸಭೆ ಕರೆದು ತೀರ್ಮಾನ ಮಾಡುತ್ತೇನೆ. ಅವರು ಏನು ಹೇಳುತ್ತಾರೆ ಅದೇ ಅಂತಿಮ ಎಂದಿದ್ದರು.

ಅರಸೀಕೆರೆಯ ತಮ್ಮ ತೋಟದ ಮನೆಯಲ್ಲಿ ಸಾವಿರಾರು ಕಾರ್ಯಕರ್ತರು, ಬೆಂಬಲಿಗರ ಸಭೆ ಕರೆದು ಅಭಿಪ್ರಾಯ ಕೇಳಿದ್ದ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ಕಾರ್ಯಕರ್ತರು ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.

ಮಾರ್ಚ್ 5 ರಂದು ಅರಸೀಕೆರೆ ತಾಲೂಕಿನ ಗುತ್ತಿನಗೆರೆ ಗ್ರಾಮಕ್ಕೆ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಈ ವೇಳೆ ಶಿವಲಿಂಗೇಗೌಡ ಕಾಂಗ್ರೆಸ್ ಸೇರಲು ಮುಹೂರ್ತ ಫಿಕ್ಸ್ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular