Wednesday, March 18, 2026
Google search engine
Homeಮುಖಪುಟಲಂಚದ ಪ್ರಕರಣ - ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಲಂಚದ ಪ್ರಕರಣ – ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡ ನಂತರ ಪರಾರಿಯಾಗಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಕೆ.ನಟರಾಜನ್ ಅವರು 48 ಗಂಟೆಗಳ ಒಳಗೆ ತನಿಖಾ ಕಚೇರಿಯ ಮುಂದೆ ಶರಣಾಗಬೇಕು ಮತ್ತು ಬಂಧನದ ಸಂದರ್ಭದಲ್ಲಿ 5 ಲಕ್ಷ ರೂಪಾಯಿಗಳ ಬಾಂಡ್ ಅನ್ನು ಜಾರಿಗೊಳಿಸುವ ಮೂಲಕ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂಬ ಷರತ್ತಿನೊಂದಿಗೆ ಮಧ್ಯಂತರ ನಿರೀಕ್ಷಣಾ ಜಮೀನು ಮಂಜೂರು ಮಾಡಿದರು.

ವಿರೂಪಾಕ್ಷಪ್ಪ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಮುಖ್ಯ ಅರ್ಜಿಯ ಅಂತಿಮ ಇತ್ಯರ್ಧದವರೆಗೆ ಜಾರಿಯಲ್ಲಿರುತ್ತದೆ ಮತ್ತು ಅವರು ತನಿಖೆಗೆ ಸಹಕರಿಸಬೇಕು. ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಕಚೇರಿಗೆ ಪ್ರವೇಶಿಸಬಾರದು ಎಂದು ನ್ಯಾಯಾಲಯ ಹೇಳಿದರು.

ಕೆಎಸ್.ಡಿಎಲ್ ನ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಪರಾರಿಯಾಗಿದ್ದ ವಿರೂಪಾಕ್ಷಪ್ಪ, ಬಿಡಬ್ಲ್ಯೂಎಸ್ಎಸ್ ಬಿ ಮುಖ್ಯ ಲೆಕ್ಕಾಧಿಕಾರಿಯಾಗಿರುವ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಕೆಎಸ್.ಡಿಸಿಗೆ ರಾಸಾಯನಿಕ ತೈಲ ಪೂರೈಕೆಗೆ ಟೆಂಡರ್ ನೀಡಲು ಏಜೆನ್ಸಿಯಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರರೆ. ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular