Wednesday, March 18, 2026
Google search engine
Homeಮುಖಪುಟದ್ವಿತೀಯ ಪಿಯು ಪರೀಕ್ಷೆ ಆರಂಭ - ನಾಳೆಯ ಕರ್ನಾಟಕ ಬಂದ್ ವಾಪಸ್ ಪಡೆದ ಕಾಂಗ್ರೆಸ್

ದ್ವಿತೀಯ ಪಿಯು ಪರೀಕ್ಷೆ ಆರಂಭ – ನಾಳೆಯ ಕರ್ನಾಟಕ ಬಂದ್ ವಾಪಸ್ ಪಡೆದ ಕಾಂಗ್ರೆಸ್

ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕೆಂದು ಕರೆ ನೀಡಿದ್ದ ಕರ್ನಾಟಕ ಬಂದ್ ಅನ್ನು ಕಾಂಗ್ರೆಸ್ ವಾಪಸ್ ಪಡೆದಿದೆ.

ಮಾರ್ಚ್ 9 ರಿಂದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಆರಂಭಗೊಳ್ಳಲಿವೆ. ಹೀಗಾಗಿ ಬಂದ್ ಅನ್ನು ವಾಪಸ್ ಪಡೆಯುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ.

ನಾಳೆ ಬೆಳಗ್ಗೆ 9 ರಿಂದ 11.30ರವರೆಗೆ ಬಂದ್ ಆಚರಿಸಲು ಕೆಪಿಸಿಸಿ ಅಧ್ಯಕ್ಷರು ಕರೆ ನೀಡಿದ್ದರು.

ಗುರುವಾರದಿಂದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯಲಿರುವುದರಿಂದ ಕರ್ನಾಟಕ ಬಂದ್ ಅನ್ನು ವಾಪಸ್ ಪಡೆಯಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular