ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕೆಂದು ಕರೆ ನೀಡಿದ್ದ ಕರ್ನಾಟಕ ಬಂದ್ ಅನ್ನು ಕಾಂಗ್ರೆಸ್ ವಾಪಸ್ ಪಡೆದಿದೆ.
ಮಾರ್ಚ್ 9 ರಿಂದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಆರಂಭಗೊಳ್ಳಲಿವೆ. ಹೀಗಾಗಿ ಬಂದ್ ಅನ್ನು ವಾಪಸ್ ಪಡೆಯುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ.
ನಾಳೆ ಬೆಳಗ್ಗೆ 9 ರಿಂದ 11.30ರವರೆಗೆ ಬಂದ್ ಆಚರಿಸಲು ಕೆಪಿಸಿಸಿ ಅಧ್ಯಕ್ಷರು ಕರೆ ನೀಡಿದ್ದರು.
ಗುರುವಾರದಿಂದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯಲಿರುವುದರಿಂದ ಕರ್ನಾಟಕ ಬಂದ್ ಅನ್ನು ವಾಪಸ್ ಪಡೆಯಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.


