Wednesday, March 18, 2026
Google search engine
Homeಮುಖಪುಟದೆಹಲಿ - ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ದೆಹಲಿ – ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಆಮ್ ಆದ್ಮಿ ಪಕ್ಷದ ಶಾಸಕರಾದ ಸೌರಭ್ ಭಾರದ್ವಾಜ್ ಮತ್ತು ಅತಿಶಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಉಭಯ ಸಚಿವರ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಮ್ ವೀರ್ ಸಿಂಗ್ ಬಿಧೂರ್ ಕೂಡ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದರು.

ಅತಿಶಿ ಅವರು ಶಿಕ್ಷಣ, ಪಿಡಬ್ಲ್ಯೂಡಿ, ವಿದ್ಯುತ್ ಮತ್ತು ಪ್ರವಾಸೋದ್ಯಮ ಇಲಾಖೆಗಳನ್ನು ನಿರ್ವಹಿಸಿದರೆ, ಭಾರದ್ವಾಜ್ ಅವರು ಆರೋಗ್ಯ ನಗರಾಭಿವೃದ್ದಿ, ನೀರು ಮತ್ತು ಕೈಗಾರಿಕೆಗಳನ್ನು ನೋಡಿಕೊಳ್ಳುತ್ತಾರೆ.

ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ ನಂತರ, ಎರಡು ಸಂಪುಟ ದರ್ಜೆ ಸಚಿವ ಸ್ಥಾನಗಳು ಖಾಲಿ ಬಿದ್ದವು.

2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಮಾರ್ಚ್ 20ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನ್ಯಾಯಾಂಗ ಬಂಧನದಲ್ಲಿರುವ ಜೈನ್ ಅವರನ್ನು ಕಳೆದ ವರ್ಷ ಮೇ 30 ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular