ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣ ಮಾಡುವುದಿಲ್ಲ ಎಂದು ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಮಗ ಅಭಿಷೇಕ್ ಗೆ ಟಿಕೆಟ್ ಕೇಳಿಲ್ಲ, ಕೇಳುವುದೂ ಇಲ್ಲ ಎಂದು ಹೇಳಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಪುತ್ರನಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಿಂದ ಟಿಕೆಟ್ ಕೊಡುವ ಆಹ್ವಾನ ಬಂದಿತ್ತು. ಅದನ್ನು ನಯವಾಗಿಯೇ ತಿರಸ್ಕರಿಸಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಸೇರಲು ಕಾನೂನು ತೊಡಕಿದ್ದು, ಸದ್ಯಕ್ಕೆ ಬಿಜೆಪಿಗೆ ಬೆಂಬಲಿಸಿರುವುದಾಗಿ ಘೋಷಿಸಿದ್ದಾರೆ. ಮಂಡ್ಯ ರಾಜಕಾರಣ ಶುದ್ದೀಕರಣಗೊಳಿಸಲು ಬಿಜೆಪಿಗೆ ಬೆಂಬಲ ಘೋಷಿಸಿರುವುದಾಗಿ ಅವರು ಹೇಳಿದ್ದಾರೆ.
ಸುಮಲತ ಅಂಬರೀಷ್ ಬಿಜೆಪಿ ಸೇರ್ಪಡೆಯಾಗುವ ಕನಸಿಗೂ ತಣ್ಣೀರು ಎರಚಿದಂತಾಗಿದೆ. ಲೋಕಸಭಾ ಚುನಾವಣೆ ನಡೆದು ಆರು ತಿಂಗಳ ಒಳಗೆ ಯಾವುದೇ ಪಕ್ಷವನ್ನು ಸೇರಬಹುದಾಗಿದೆ. ಆದರೆ ಈಗ ಬಿಜೆಪಿ ಸೇರ್ಡೆಗೂ ಸಂವಿಧಾನ ನಿಯಮಗಳು ಅಡ್ಡಿ ಬರುತ್ತಿವೆ.


