ದೇಶದಲ್ಲಿ ಮೊದಲ ಬಾರಿಗೆ ಎಚ್3ಎನ್2 ವೈರಸ್ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಕರ್ನಾಟಕದಲ್ಲಿ ಓರ್ವ ಮತ್ತು ಹರಿಯಾಣದಿಂದ ಓರ್ವ ಸೋಂಕಿಗೆ ಸಾವನ್ನಪ್ಪಿದ್ದಾರೆ.
ಕರ್ನಾಟಕದ ಹಾಸನ ಜಿಲ್ಲೆಯ 82 ವರ್ಷದ ಈರೇಗೌಡ ಮಾರ್ಚ್ 6ರಂದು ಎಚ್3ಎನ್2 ವೈರಸ್ ಗೆ ಬಲಿಯಾದರು. ಕರ್ನಾಟಕ ಆರೋಗ್ಯ ಆಯುಕ್ತ ಡಿ.ರಂದೀಪ್ ಅವರು ಈರೇಗೌಡ ಅವರ ಸಾವನ್ನು ಖಚಿತಪಡಿಸಿದ್ದಾರೆ.
ಫೆಬ್ರವರಿ 24ರಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಈರೇಗೌಡ ಆರು ದಿನಗಳ ನಂತರ ಕೊನೆಯುಸಿರೆಳೆದಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಯನ್ನು ಉಲ್ಲೇಖಿಸಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಇನ್ಪ್ಯೂಯೆನ್ಸ ತರಹದ ರೋಗಲಕ್ಷಣಗಳೊಂದಿಗೆ ಆಸ್ಪತ್ರೆಗೆ ಈರೇಗೌಡರನ್ನು ಆಸ್ಪತ್ರೆಗೆ ಕರೆ ತರಲಾಯಿತು. ಅಧಿಕ ತಕ್ತದೊತ್ತಡ ಮತ್ತು ಮಧುಮೇಹದಂತಹ ಕೊಮೇರ್ಬಿಡಿಗಳನ್ನು ಅವರು ಹೊಂದಿದ್ದರು ಎನ್ನಲಾಗಿದೆ.
ಎಲ್ಲಾ ಸಕಾರಾತ್ಮಕ ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಆರೋಗ್ಯ ಅಧಿಕಾರಿಗಳು ಮೃತ ವ್ಯಕ್ತಿಯ ಎಲ್ಲಾ ಪ್ರಾಥಮಿಕ ಮತ್ತು ಮಾದ್ಯಮಿಕ ಸಂಪರ್ಕಗಳನ್ನು ಸಮೀಕ್ಷೆ ಮಾಡಿದ್ದಾರೆ. ಆದಾಗ್ಯು ಇದುವರೆಗೆ ಅವರ ಪತ್ನಿ ಸೇರಿದಂತೆ ಎಲ್ಲರಿಗೂ ವೈರಸ್ ನೆಗೆಟೀವ್ ಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮುಂದಿನ 14 ದಿನಗಳ ಕಾಲ ಈ ಪ್ರದೇಶದಲ್ಲಿ ಕಣ್ಗಾವಲು ಮುಂದುವರೆಸಲು ಅವರು ಯೋಜಿಸಿದ್ದಾರೆ.


