ತುಮಕೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಪರಶಿವಮೂರ್ತಿ ಅವರನ್ನು ರಾಜ್ಯ ಸರ್ಕಾರ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿಗಳನ್ನಾಗಿ ನೇಮಕ ಮಾಡಿ ಆದೇಶಿಸಿದೆ.
ತುಮಕೂರು ವಿಶ್ವವಿದ್ಯಾಲಯದ ಡಿ.ವಿ.ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರು ಹಾಗೂ ಶಾಸನ ತಜ್ಞರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರನ್ನು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಕ ಮಾಡಿರುವುದಕ್ಕೆ ಅವರ ಶಿಪ್ಯ ಬಳಗ ಸಂತಸ ವ್ಯಕ್ತಪಡಿಸಿದೆ.
ಇದು ಬಹಳ ಸಂತೋಷದ ಸಂಗತಿ. ಗೌರವಾನ್ವಿತ ಹುದ್ದೆಗೆ ಆಯ್ಕೆಯಾದ ತಮಗೆ ಹೃದಯಪೂರ್ವಕ ಅಭಿನಂದನೆಗಳು ಸರ್ ಎಂದು ಮಲ್ಲಿಕಾರ್ಜುನ ಎಂ.ಟಿ. ಮಚ್ಚಂದ್ರ, ಗೋವಿಂದರಾಜು ಕಲ್ಲೂರ, ಸಹಾಯಕ ಪ್ರಾಧ್ಯಾಪಕ ಡಾ. ರವಿಕುಮಾರ್ ನೀಹ ಅಭಿನಂದನೆಗಳನ್ನು ತಿಳಿಸಿದ್ದಾರೆ.


