ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ತನ್ನ ಮೊದಲ ಕಂತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ತುಮಕೂರು ಜಿಲ್ಲೆಯ 11 ಕ್ಷೇತ್ರದಲ್ಲಿ ತುಮಕೂರು ಗ್ರಾಮಾಂತರ, ತುಮಕೂರು ನಗರ ಮತ್ತು ಗುಬ್ಬಿ ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಚಿಕ್ಕನಾಯಕನಹಳ್ಳಿ – ಕಿರಣ್ ಕುಮಾರ್
ತಿಪಟೂರು – ಕೆ.ಷಡಕ್ಷರಿ
ತುರುವೇಕೆರೆ – ಕಾಂತರಾಜು ಬಿ.ಎಂ
ಕುಣಿಗಲ್ – ಡಾ.ಎಚ್.ಡಿ.ರಂಗನಾಥ್
ಕೊರಟಗೆರೆ – ಡಾ.ಜಿ.ಪರಮೇಶ್ವರ್
ಶಿರಾ – ಟಿ.ಬಿ.ಜಯಚಂದ್ರ
ಪಾವಗಡ – ಎಚ್.ವಿ.ವೆಂಕಟೇಶ್
ಮಧುಗಿರಿ – ಕೆ.ಎನ್.ರಾಜಣ್ಣ
ಚುನಾವಣೆ ಸಮೀಪಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ, ಕನಕಪುರ ಕ್ಷೇತ್ರದಿಂದ ಡಿ.ಕೆ.ಶಿವಕುಮಾರ್, ಕೊರಟಗೆರೆಯಿಂದ ಡಾ.ಜಿ.ಪರಮೇಶ್ವರ್, ಯಮನಕಮರಡಿ ಕ್ಷೇತ್ರದಿಂದ ಸತೀಶ್ ಜಾರಕಿಹೊಳಿ, ಬಬಲೇಶ್ವರ ಕ್ಷೇತ್ರದಿಂದ ಎಂ.ಬಿ.ಪಾಟೀಲ್, ಚಿತ್ತಾಪುರ ಕ್ಷೇತ್ರದಿಂದ ಪ್ರಿಯಾಂಕ್ ಖರ್ಗೆ, ಹಳಿಯಾಳದಿಂದ ಆರ್.ವಿ.ದೇಶಪಾಂಡೆ, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಅವರನ್ನು ಕಣಕ್ಕೆ ಇಳಿಸಲಾಗಿದೆ.
124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿದೆ.




ದೇವನಹಳ್ಳಿ ಕ್ಷೇತ್ರದಿಂದ ಕೆ.ಎಚ್.ಮುನಿಯಪ್ಪ, ನರಸಿಂಹರಾಜ ಕ್ಷೇತ್ರದಿಂದ ತನ್ವಿರ್ ಸೇಠ್, ಟಿ.ನರಸೀಪುರದಿಂದ ಎಚ್.ಸಿ.ಮಹದೇವಪ್ಪ, ಚಾಮರಾಜಪೇಟೆ ಕ್ಷೇತ್ರದಿಂದ ಜಮೀರ್ ಅಹಮದ್ ಅವರನ್ನು ಕಣಕ್ಕೆ ಇಳಿಸಲಾಗಿದೆ.


