ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗಲು ಆಕಾಂಕ್ಷಿಗಳಾಗಿರುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭೆಯ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದ ಪ್ರಮುಖ ನಾಯಕರಲ್ಲಿ ಪ್ರಮುಖರಾಗಿದ್ದಾರೆ.
ಡಿ.ಕೆ.ಶಿವಕುಮಾರ್ ಎಂದಿನಂತೆ ಕನಕಪುರದಿಂದ ಸ್ಪರ್ಧಿಸುತ್ತಿದ್ದರೆ, ಸಿದ್ದರಾಮಯ್ಯ ಅವರು ಪ್ರಸ್ತುತ ತಮ್ಮ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರಕ್ಕೆ ಮರಳುತ್ತಿದ್ದಾರೆ.
ಕಾಂಗ್ರೆಸ್ ಇಂದು ಬಿಡುಗಡೆ ಮಾಡಿರುವ 124 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರಿಲ್ಲ. ಬೇರೆ ಯಾವುದೇ ವಿಭಾಗಕ್ಕೂ ಇಲ್ಲವಾಗಿದೆ.

ಪ್ರಸ್ತುತ ಬಾಗಲಕೋಟೆ ಜಿಲ್ಲೆಯ ಬಾದಾಮಿಯನ್ನು ಪ್ರತಿನಿಧಿಸುತ್ತಿರುವ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವುದಾಗಿ ಈ ಹಿಂದೆ ಘೋಷಿಸಿದ್ದರು. ಆದರೆ ಅಲ್ಲಿಂದ ಹೋರಾಟದ ಅಪಾಯದ ಬಗ್ಗೆ ಪಕ್ಷದ ನಾಯಕತ್ವವು ಅವರಿಗೆ ಎಚ್ಚರಿಕೆ ನೀಡಿದ ನಂತರ ಹಿಂದೆ ಸರಿದರು.
ಶುಕ್ರವಾರ ವರುಣಾದಿಂದ ತಮ್ಮ ಉಮೇದುವಾರಿಕೆಯನ್ನು ಖಚಿತಪಡಿಸುವಾಗ ಮಾಜಿ ಸಿಎಂ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಸೂಚನೆ ನೀಡಿದ್ದರು. ಆದರೆ ಮೊದಲ ಪಟ್ಟಿಯಲ್ಲಿ ಎರಡನೇ ಕ್ಷೇತ್ರವನ್ನು ಪ್ರಕಟಿಸಿಲ್ಲ. ಸಿದ್ದರಾಮಯ್ಯ ಅವರು ಕೋಲಾರ ಮತ್ತು ಬಾದಾಮಿ ಮೇಲೆ ಕಣ್ಣಿಟ್ಟಿರುವ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿರುವ ಪ್ರಸ್ತುತ ವಿಧಾನಸಭೆ ಚುನಾವಣೆಗೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳಿಗೆ ಟಿಕೆಟ್ ಅನ್ನು ಘೋಷಿಸಿದೆ.
ಇನ್ನು 100 ಸೀಟುಗಳಿಗೆ ಹೆಸರು ಅಂತಿಮಗೊಳಿಸಬೇಕಿದೆ. ಕರ್ನಾಟಕವು ಒಟ್ಟು 224 ವಿಧಾನಸಭಾ ಕ್ಷೇಥ್ರಗಳನ್ನು ಹೊಂದಿದೆ. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ.


